HomeEducationಶ್ರೀ ವಿಶ್ವಕರ್ಮ ಭವನದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶ್ರೀ ವಿಶ್ವಕರ್ಮ ಭವನದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

For Dai;y Updates Join Our whatsapp Group

Pratibha Purasak for meritorious students at Sri Vishwakarma Bhawan
ಗದುಗಿನ ವಿಜಯನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾದ ಶ್ರೀ ವಿಶ್ವಕರ್ಮ ಭವನದಲ್ಲಿ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಡುಪಿಯ ಕಡಪಾಡಿ ಪಡುಕುತ್ಯಾರು ಸರಸ್ವತಿ ಪೀಠದ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಶಿತ ಕಾಳಹಸ್ತೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿದರು. ಗದಗ ಎಪಿಎಂಸಿ ಸದಸ್ಯ ಅಪ್ಪಣ್ಣ ಇನಾಮತಿ, ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಕಡ್ಲಿಕೊಪ್ಪ, ಗಣ್ಯರಾದ ಕೆ.ಡಿ. ಬಡಿಗೇರ, ಪಿ.ಬಿ. ಬಡಿಗೇರ, ಎ.ಆರ್. ಬಡಿಗೇರ, ನಿರಂಜನ ಎನ್.ಬಡಿಗೇರ, ಎ.ಎನ್. ಬಡಿಗೇರ ಕೆ.ಎಸ್. ಬಡಿಗೇರ, ಬಿ.ಎಮ್. ಬಡಿಗೇರ, ಶಿವಲೀಲಾ ಬಡಿಗೇರ, ರಿಂದಮ್ಮ ವಡ್ಡಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img