ಬೆಂಗಳೂರು: ಸ್ಲೀಪರ್ ಕೋಚ್ ಬಸ್ಗಳ ಪದೇಪದೇ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ, ದೇವನಹಳ್ಳಿ ಆರ್ಟಿಒ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ.
ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್ ಬಳಿ ಬಸ್ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಖಾಸಗಿ ಸ್ಲೀಪರ್ ಕೋಚ್ ಬಸ್ಗಳಲ್ಲಿ ಇರುವ ಪಾರ್ಟಿಷನ್ ಡೋರ್ಗಳನ್ನು ತೆರವುಗೊಳಿಸಿದ್ದಾರೆ.
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗಳನ್ನು ತಪಾಸಣೆ ಮಾಡಿದ ವೇಳೆ, ಡ್ರೈವರ್ ಮತ್ತು ಪ್ರಯಾಣಿಕರ ನಡುವೆ ಅಳವಡಿಸಿದ್ದ ಡೋರ್ಗಳನ್ನು ತೆಗೆದುಹಾಕಲಾಗಿದೆ.
ಒಟ್ಟು 8 ಬಸ್ಗಳ ಡೋರ್ಗಳನ್ನು ಬಿಚ್ಚಿಸಿ ಸೀಜ್ ಮಾಡಲಾಗಿದೆ. ಈ ಕಾರ್ಯಾಚರಣೆ ದೇವನಹಳ್ಳಿ ಆರ್ಟಿಒ ಸುಧೀರ್ ಅವರ ನೇತೃತ್ವದಲ್ಲಿ ನಡೆಯಿತು.



