ವಿಜಯಸಾಕ್ಷಿ ಸುದ್ದಿ, ಗದಗ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗದಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ 5, 7, 9, 11, 13, 15, 17, 19 ಹಾಗೂ 21ನೇ ದಿನದ ವಿಸರ್ಜನೆ ಸಂದರ್ಭದಲ್ಲಿ ವಿವಿಧ ಅವಧಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ತಿಳಿಸಿದ್ದಾರೆ.
ಸೆ.18 ಬೆಳಗ್ಗೆ 6ರಿಂದ ಸೆ.19 ಬೆಳಗ್ಗೆ 6ರವರೆಗೆ, ಸೆ.20ರಿಂದ 21, ಸೆ.22ರಿಂದ 23 ಹಾಗೂ ಸೆ.24ರಿಂದ 25ರವರೆಗೆ ಜಿಲ್ಲೆಯಾದ್ಯಂತ ಮದ್ಯ ನಿಷೇಧ ಜಾರಿಯಲ್ಲಿರುತ್ತದೆ.
ಸೆ.26ರಿಂದ 27ರವರೆಗೆ ಮುಳಗುಂದ, ಲಕ್ಷ್ಮೇಶ್ವರ ಹಾಗೂ ನರೇಗಲ್ ಠಾಣಾ ವ್ಯಾಪ್ತಿಯಲ್ಲಿ, ಸೆ.28ರಿಂದ 29ರವರೆಗೆ ಲಕ್ಷ್ಮೇಶ್ವರ ಠಾಣಾ ವ್ಯಾಪ್ತಿಯಲ್ಲಿ, ಸೆ.30ರಿಂದ ಅ.1ರವರೆಗೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮ ವ್ಯಾಪ್ತಿಯಲ್ಲಿ, ಅ.2ರಿಂದ 3ರವರೆಗೆ ಲಕ್ಷ್ಮೇಶ್ವರ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಅ.4ರಿಂದ 5ರವರೆಗೆ ಗದಗ–ಬೆಟಗೇರಿ ನಗರಸಭೆ ಮತ್ತು ಗಜೇಂದ್ರಗಡ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ–ಸಾಗಾಟ ನಿಷೇಧಿಸಲಾಗಿದೆ.
ನಿಷೇಧ ಅವಧಿಯಲ್ಲಿ ಸಂಬಂಧಿಸಿದ ಪ್ರದೇಶಗಳ ಬಾರ್, ಕ್ಲಬ್, ಬಿಯರ್ ಹಾಗೂ ಭಾರತೀಯ ತಯಾರಿಕಾ ಮದ್ಯದ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಪರಿಸ್ಥಿತಿಗೆ ಅನುಗುಣವಾಗಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅಬಕಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.



