HomeGadag News2028ರ ಚುನಾವಣೆಗೆ ಎಸ್‌ಡಿಪಿಐ ಸಜ್ಜು

2028ರ ಚುನಾವಣೆಗೆ ಎಸ್‌ಡಿಪಿಐ ಸಜ್ಜು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಗದಗ ನಗರದಲ್ಲಿ ಆಯೋಜಿಸಿದ್ದ ‘ಲೀಡರ್ಸ್ ಕಾಂಕ್ಲೇವ್’ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಿ, ಸಂಘಟನೆ ಬಲವರ್ಧನೆ, ಮುಂಬರುವ ಚುನಾವಣಾ ಸಿದ್ಧತೆ ಹಾಗೂ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.

ಮುಳಗುಂದ ನಾಕಾ ವೃತ್ತದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಜಿಲ್ಲಾ ಘಟಕದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಮೆರವಣಿಗೆಯ ಮೂಲಕ ಕನಕ ಭವನ ಫಂಕ್ಷನ್ ಹಾಲ್‌ಗೆ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಬಲಪಡಿಸುವ ಸಮರ್ಥ ನಾಯಕತ್ವವನ್ನು ಬೆಳೆಸುವುದು ಪಕ್ಷದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪಕ್ಷವು ದೇಶದ 15 ರಾಜ್ಯಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿದೆ ಎಂದು ತಿಳಿಸಿದರು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಸಂಘಟನೆ ಬಲವರ್ಧನೆ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

ಮುಂಬರುವ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ 2028ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸಕ್ರಿಯವಾಗಿ ಸ್ಪರ್ಧಿಸಲಿದ್ದು, ರಾಜ್ಯದ 50 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಗದಗ ಜಿಲ್ಲೆಯಲ್ಲಿಯೂ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ “ಎಸ್‌ಡಿಪಿಐ ಬಿಜೆಪಿಯ ಬಿ-ಟೀಮ್ ಎಂಬ ಆರೋಪ” ಕುರಿತ ಪ್ರಶ್ನೆಗೆ ಉತ್ತರಿಸಿದ ಅಬ್ದುಲ್ ಮಜೀದ್, ತಮ್ಮ ಪಕ್ಷ ಯಾರನ್ನಾದರೂ ಗೆಲ್ಲಿಸಲು ಅಥವಾ ಸೋಲಿಸಲು ಚುನಾವಣೆ ಎದುರಿಸುವುದಿಲ್ಲ. ಜನಪರ ಆಡಳಿತಕ್ಕಾಗಿ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಾಫಿ, ರಾಷ್ಟ್ರೀಯ ಕಾರ್ಯದರ್ಶಿ ಮೊಯಿದ್ದೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಅಫ್ಸರ್ ಕೆ.ಆರ್. ನಗರ ಹಾಗೂ ಗದಗ ಜಿಲ್ಲಾ ಅಧ್ಯಕ್ಷ ಬಿಲಾಲ್ ಗೋಕಾವಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

“ಪ್ರಜಾಪ್ರಭುತ್ವ, ಸಂವಿಧಾನ, ಸಾಮಾಜಿಕ ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಲಪಡಿಸುವ ಸಮರ್ಥ ನಾಯಕತ್ವವನ್ನು ಬೆಳೆಸುವುದೇ ಎಸ್‌ಡಿಪಿಐಯ ಪ್ರಮುಖ ಗುರಿಯಾಗಿದೆ.”

– ಎಂ.ಕೆ. ಫೈಝಿ, ರಾಷ್ಟ್ರೀಯ ಅಧ್ಯಕ್ಷ, ಎಸ್‌ಡಿಪಿಐ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img