ಕರವೇ ಸ್ವಾಭಿಮಾನಿ ಸೇನೆ ಗದಗ ಜಿಲ್ಲಾಧ್ಯಕ್ಷರಾಗಿ ಶರಣು ಎಸ್.ಗೋಡಿಯವರು ನೇಮಕರಾದ ತರುವಾಯ ಭೈರನಹಟ್ಟಿ ಹಾಗೂ ಶಿರೋಳ ತೋಂಟದಾರ್ಯ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಶಾಂತಲಿಂಗ ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಇಸ್ಮಾಯಿಲ್ ಅಡೂರು, ಗದಗ ಜಿಲ್ಲಾ ಉಪಾಧ್ಯಕ್ಷ ಅಜಯ ಕಂಬಳಿ, ಪ್ರಮುಖರಾದ ನಾಗೇಶ್ ಅಮರಾಪುರ, ಕಾವ್ಯ ಹುಂಬಿ ಮುಂತಾದವರು ಉಪಸ್ಥಿತರಿದ್ದರು.