ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
https://www.facebook.com/share/v/1J5VwTAzR6/
ಮಾರ್ಚ್ 8ರ ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆಯ ಹಿನ್ನೆಲೆ ಮನೆಯ ಹೊರಾಂಗಣದಲ್ಲಿ ಮಲಗಿದ್ದರು. ಈ ವೇಳೆ ಕಪ್ಪೆಯನ್ನು ಅಟ್ಟಾಡಿಸಿಕೊಂಡು ಬಂದ ಹಾವು ಹಾಸಿಗೆಯೊಳಗೆ ನುಗ್ಗಿ ಯಲ್ಲಮ್ಮ ಅವರಿಗೆ ಕಚ್ಚಿದೆ.
ಈ ಘಟನೆ ಸಮೀಪದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಾವು ಕಚ್ಚುತ್ತಿದ್ದಂತೆಯೇ ಯಲ್ಲಮ್ಮ ಥಟ್ಟನೆ ಎದ್ದು ಕುಳಿತುಕೊಂಡು ಹಾವನ್ನು ಹೊಡೆಯಲು ಯತ್ನಿಸಿರುವುದು ದೃಶ್ಯದಲ್ಲಿ ಕಾಣಿಸುತ್ತದೆ.
ಹಾವು ಕಡಿತದಿಂದ ಅಸ್ವಸ್ಥಗೊಂಡ ಯಲ್ಲಮ್ಮ ಅವರನ್ನು ತಕ್ಷಣವೇ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.



