HomeGadag Newsಇನಾಮತಿ ಪ್ರೌಢಶಾಲೆಗೆ ಕ್ರೀಡಾ ಕಿರೀಟ

ಇನಾಮತಿ ಪ್ರೌಢಶಾಲೆಗೆ ಕ್ರೀಡಾ ಕಿರೀಟ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಕುರ್ತಕೋಟಿ: ಗದಗ ತಾಲೂಕಿನ ಬೂದೀಶ್ವರ ಹೊಸಳ್ಳಿ ಗ್ರಾಮದ ಬೂದೀಶ್ವರ ವಿದ್ಯಾಪೀಠದಲ್ಲಿ ನಡೆದ 2026-27ನೇ ಸಾಲಿನ ಹುಲಕೋಟಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕುರ್ತಕೋಟಿಯ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಮನೋಹರ ಅಮರಪ್ಪ ಇನಾಮತಿ ಪ್ರೌಢಶಾಲೆ ಗಮನಾರ್ಹ ಸಾಧನೆ ಮಾಡಿದೆ.

ಬಾಲಕಿಯರ ವಿಭಾಗದಲ್ಲಿ ಶಿಲ್ಪಾ ಕಂಬಾರ 400, 1500 ಹಾಗೂ 3000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಸವಿತಾ ಶಿ. ಕಾಬಳ್ಳಿ ಗುಂಡು ಎಸೆತ, ಜಾವೆಲಿನ್ ಎಸೆತ ಹಾಗೂ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ವೀರಾಗ್ರಣಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅಪೂರ್ವ ದಿಂಡೆನವರ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಬಾಲಕಿಯರ ಗುಂಪು ವಿಭಾಗದಲ್ಲಿ ವಾಲಿಬಾಲ್ ಹಾಗೂ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದೆ. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಲಕ್ಷ್ಮೀ ಪೂಜಾರ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ ಪಡೆದು ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಇದೇ ವಿಭಾಗದ ವಾಲಿಬಾಲ್ ಹಾಗೂ ಥ್ರೋಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದಿವೆ.

ಬಾಲಕರ ವಿಭಾಗದಲ್ಲಿ ಆನಂದ ಅಸುಂಡಿ ಉದ್ದ ಜಿಗಿತ, ಎತ್ತರ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಚೇತನ್ ಉಗಲಾಟ 100 ಮೀಟರ್ ಓಟದಲ್ಲಿ ಪ್ರಥಮ, ವಿನೋದ ತಂಟ್ರಿ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ತರುಣ ಜಕ್ಕಲಿ, ಸಮರ್ಥ್ ವಡ್ಡರ, ಶಿವಾನಂದ ನಾಗರಳ್ಳಿ, ಕಾರ್ತಿಕ್ ಇಳಿಗೇರ ಹಾಗೂ ಇರ್ಫಾನ್ ಅಣ್ಣಿಗೇರಿ ವಿವಿಧ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ಥ್ರೋಬಾಲ್ ಹಾಗೂ ರಿಲೇ ಓಟದಲ್ಲಿ ಪ್ರಥಮ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಲಭಿಸಿದೆ.

ವಿವಿಧ ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮುಂದಿನ ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಎಂ. ಮೂಲಿಮನಿ, ಆಡಳಿತಾಧಿಕಾರಿ ಆರ್.ಎಸ್. ಪಾಟೀಲ, ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಯು.ವಿ. ಬೆಟಗೇರಿ, ಸದಸ್ಯ ಅಪ್ಪಣ್ಣ ಇನಾಮತಿ, ಶಾಲೆಯ ಮುಖ್ಯೋಪಾಧ್ಯಾಯ ಜಂಬುನಾಥ ಹರಿವಾಣ, ದೈಹಿಕ ಶಿಕ್ಷಕ ಮಂಜುನಾಥ ಅಂಗಡಿ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿದರೆ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಈ ಗೆಲುವು ವಿದ್ಯಾರ್ಥಿಗಳ ಪರಿಶ್ರಮಕ್ಕೆ ದೊರೆತ ಫಲ.

— ಜಂಬುನಾಥ ಹರಿವಾಣ, ಮುಖ್ಯೋಪಾಧ್ಯಾಯರು

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img