HomeKarnataka Newsರಾಜ್ಯಾದ್ಯಂತ ಕಾವೇರಿ ಹೋರಾಟ: ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌!

ರಾಜ್ಯಾದ್ಯಂತ ಕಾವೇರಿ ಹೋರಾಟ: ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌!

For Dai;y Updates Join Our whatsapp Group

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಗಳ ವಿರುದ್ಧ ರಾಜ್ಯದಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿವೆ.

ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕನ್ನಡ ಒಕ್ಕೂಟಗಳ ಸಭೆ ನಡೆದಿದ್ದು, ಸಭೆಯ ಬಳಿಕ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಬಂದ್ ನಿರ್ಧಾರವನ್ನು ಪ್ರಕಟಿಸಿದರು.

ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ರಾಜ್ಯಾದ್ಯಂತ ಸಂಪೂರ್ಣ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಬಂದ್‌ಗೆ ರಾಜ್ಯದ ಎಲ್ಲಾ ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ಸಾರಿಗೆ ಚಾಲಕರ ಸಂಘಗಳು ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಪಾಡಬೇಕು. CWRC ಹಾಗೂ CWMA ಆದೇಶಗಳನ್ನು ವಿರೋಧಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಈ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಂಘಟನೆಗಳು ತಿಳಿಸಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img