HomeUttara Kannadaಸಾಲ ಕೊಟ್ಟ 10 ಸಾವಿರ ರೂಪಾಯಿ ಮರಳಲಿಲ್ಲ: ಪರೀಕ್ಷೆ ಬರೆಯಲಾಗದೆ ವಿದ್ಯಾರ್ಥಿನಿ ಆತ್ಮಹತ್ಯೆ

ಸಾಲ ಕೊಟ್ಟ 10 ಸಾವಿರ ರೂಪಾಯಿ ಮರಳಲಿಲ್ಲ: ಪರೀಕ್ಷೆ ಬರೆಯಲಾಗದೆ ವಿದ್ಯಾರ್ಥಿನಿ ಆತ್ಮಹತ್ಯೆ

For Dai;y Updates Join Our whatsapp Group

ಕಾರವಾರ: ಕಾಲೇಜು ಶುಲ್ಕಕ್ಕಾಗಿ ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಹಣ ಮರಳಿ ಸಿಗದೆ ಪರೀಕ್ಷೆಯಿಂದ ವಂಚಿತಳಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.

ಗಾಯತ್ರಿ ಎಂಬ ವಿದ್ಯಾರ್ಥಿನಿ ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜು ಶುಲ್ಕ ಪಾವತಿಸಲು ತಂದೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಸಂತೋಷ ಮಾಧೇದ ನಾಯ್ಕ ಎಂಬ ಪರಿಚಯಸ್ಥ ವ್ಯಕ್ತಿ ಹಣದ ಅವಶ್ಯಕತೆ ಇದೆ ಎಂದು ಹೇಳಿ ಆಕೆಯಿಂದ ಹಣ ಪಡೆದುಕೊಂಡಿದ್ದಾನೆ.

ಆದರೆ ಹಲವು ಬಾರಿ ಕೇಳಿದರೂ ಹಣವನ್ನು ಮರಳಿ ನೀಡದ ಕಾರಣ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗಿಲ್ಲ. ಪರಿಣಾಮ ಪರೀಕ್ಷೆಯ ಹಾಲ್‌ಟಿಕೆಟ್ ಸಿಗದೆ ಆಕೆ ತೀವ್ರ ನಿರಾಸೆಗೆ ಒಳಗಾಗಿದ್ದಾಳೆ.

ಶುಲ್ಕ ಕಟ್ಟಲು ಸಾಧ್ಯವಾಗದ ನೋವಿನಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವಾದ ಎಲ್ಲ ಆಯಾಮಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img