ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದರೂ, ಇದೇ ವೇಳೆ ಏಪ್ರಿಲ್ 21ರವರೆಗೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಭಾಗದ ಮುನ್ಸೂಚನೆ ಪ್ರಕಾರ, ಏಪ್ರಿಲ್ 20ರವರೆಗೆ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದೇ ವೇಳೆ ದಕ್ಷಿಣ ಒಳನಾಡಿನ ಭಾಗಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಸಂಭವಿಸಬಹುದು ಎಂದು ತಿಳಿಸಲಾಗಿದೆ.
ಇದರ ನಡುವೆ ರಾಜ್ಯದಲ್ಲಿ ಸಾಮಾನ್ಯಕ್ಕಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್ ಮಟ್ಟಿಗೆ ತಾಪಮಾನ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 36 ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದ್ದು, ಜನರು ಬಿಸಿಲಿನ ತಾಪಕ್ಕೆ ಬಳಲುತ್ತಿದ್ದಾರೆ.
ಏಪ್ರಿಲ್ ತಿಂಗಳಲ್ಲೇ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಮುಂದಿನ ಮೇ ತಿಂಗಳಲ್ಲಿ ಇನ್ನಷ್ಟು ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



