HomeKarnataka NewsRoad Accident: ಭೀಕರ ರಸ್ತೆ ಅಪಘಾತ – ವೈದ್ಯ ಸ್ಥಳದಲ್ಲೇ ಸಾವು!

Road Accident: ಭೀಕರ ರಸ್ತೆ ಅಪಘಾತ – ವೈದ್ಯ ಸ್ಥಳದಲ್ಲೇ ಸಾವು!

For Dai;y Updates Join Our whatsapp Group

ಬೀದರ್:- ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ವೈದ್ಯ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮುಸ್ತಾಪೂರ್ ಟೋಲ್ ಗೇಟ್ ಬಳಿ ನಡೆದಿದೆ. ಟೆಂಪೋ ಟ್ರಾವೆಲ್ಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

50 ವರ್ಷದ ಡಾ. ನೀಲಕಂಠ ಬೋಸ್ಲೆ ಸಾವನ್ನಪ್ಪಿದ ವೈದ್ಯ. ಬೀದರ್ ಕಡೆಯಿಂದ ಸಂತಪೂರ್‌ಗೆ ಹೋಗುತ್ತಿದ್ದ ವೇಳೆ ಟೆಂಪೋ ಟ್ರಾವೆಲ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವೈದ್ಯ 10 ರಿಂದ 15 ಅಡಿ ದೂರ ಹಾರಿ ಬಿದ್ದಿದ್ದಾರೆ. ಭೀಕರ ರಸ್ತೆ ಅಪಘಾತಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೈದ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಔರಾದ್‌ನ ಸಂತಪುರ ಗ್ರಾಮದ ನಿವಾಸಿಯಾಗಿರುವ ವೈದ್ಯ ನೀಲಕಂಠ ಬೀದರ್‌ನಿಂದ ಸಂತಪುರ ಗ್ರಾಮದಲ್ಲಿರುವ ತನ್ನ ಕ್ಲಿನಿಕ್‌ಗೆ ಹೋಗುತ್ತಿದ್ದಾಗ ಅಫಘಾತವಾಗಿದೆ. ಸಿನಿಮೀಯಾ ರೀತಿಯಲ್ಲಿ ಭೀಕರ ರಸ್ತೆ ಅಪಘಾತದ ಭಯಾನಕ ದೃಶ್ಯಗಳು ಸಿಸಿಸಿಟಿಯಲ್ಲಿ ಸೆರೆಯಾಗಿದೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img