HomeKarnataka Newsಶ್ರೀಮಂತರ ಹಿಡಿತದಿಂದ ತಪ್ಪಿಸಿ ಬಡ ಮುಸ್ಲಿಮರ ಪರವಾಗಿ ಈ ವಕ್ಫ್ ಕಾಯ್ದೆ ಇದೆ: ಕೋಟ ಶ್ರೀನಿವಾಸ...

ಶ್ರೀಮಂತರ ಹಿಡಿತದಿಂದ ತಪ್ಪಿಸಿ ಬಡ ಮುಸ್ಲಿಮರ ಪರವಾಗಿ ಈ ವಕ್ಫ್ ಕಾಯ್ದೆ ಇದೆ: ಕೋಟ ಶ್ರೀನಿವಾಸ ಪೂಜಾರಿ

For Dai;y Updates Join Our whatsapp Group

Spread the love

ಉಡುಪಿ: ಶ್ರೀಮಂತರ ಹಿಡಿತದಿಂದ ತಪ್ಪಿಸಿ ಬಡ ಮುಸ್ಲಿಮರ ಪರವಾಗಿ ಈ ವಕ್ಫ್ ಕಾಯ್ದೆ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎರಡು ಲಕ್ಷ ಕೋಟಿ ರೂಪಾಯಿ ವಕ್ಫ್ ಆಸ್ತಿ ಶ್ರೀಮಂತ ರಾಜಕಾರಣಿಗಳ ಪಾಲಾಗಿದೆ. ಶ್ರೀಮಂತ ರಾಜಕಾರಣಿಗಳು ಮೆಡಿಕಲ್ ಕಾಲೇಜು, ಶಾಲೆ ಆಸ್ಪತ್ರೆ-ವಾಣಿಜ್ಯ ವ್ಯವಹಾರಗಳನ್ನು ಮಾಡುತ್ತಿದ್ದಾರೆ.

ಕಡಿಮೆ ಬೆಲೆಗೆ ಬಾಡಿಗೆ ಅಥವಾ ಲೀಸ್‌ಗೆ ಪಡೆದು ಎರಡು ಲಕ್ಷ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದವರು ಈ ಮಾಹಿತಿಯನ್ನು ನೀಡುತ್ತಿದ್ದಾರೆ. ಬಡವರು, ಮಹಿಳೆಯರಿಗೆ ಮಕ್ಕಳ ಶಿಕ್ಷಣಕ್ಕೆ ವಕ್ಫ್ ಆಸ್ತಿ ಬಳಕೆಯಾಗಬೇಕು.

ಶ್ರೀಮಂತರ ಹಿಡಿತದಿಂದ ತಪ್ಪಿಸಿ ಬಡ ಮುಸ್ಲಿಮರ ಪರವಾಗಿ ಈ ಕಾಯ್ದೆ ಇದೆ. ಮತೀಯ ಮತ್ತು ಮತದ ಕಾರಣಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಕ್ಫ್ ಕಾಯ್ದೆಯನ್ನು ರಾಷ್ಟ್ರಭಕ್ತ ಮುಸ್ಲಿಮರು ಬೆಂಬಲಿಸಬೇಕು ಎಂದು ವಿನಂತಿ ಮಾಡುತ್ತಿದ್ದೇನೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!