ಬೆಂಗಳೂರು: ರಿಷಬ್ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ ಕಾಂತಾರ ಸರಣಿ ಮತ್ತೊಮ್ಮೆ ಪ್ರಶಸ್ತಿ ವೇದಿಕೆಯಲ್ಲಿ ಜಯಭೇರಿ ಬಾರಿಸಿದ್ದು, ಐಎನ್ಸಿಎ ಅವಾರ್ಡ್ನಲ್ಲಿ ತ್ರಿಪಲ್ ಗೆಲುವು ಸಾಧಿಸಿದೆ.
ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶಕ ಹಾಗೂ ಅತ್ಯುತ್ತಮ ಸಿನಿಮಾ ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ, ತಮ್ಮ ನಾಲ್ಕು ವರ್ಷದ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಯಶಸ್ಸನ್ನು ತಂಡದ ಶ್ರಮಕ್ಕೆ ಅರ್ಪಿಸಿದ ಅವರು, ಕುಟುಂಬದ ಬೆಂಬಲವನ್ನು ಸ್ಮರಿಸಿದರು.
ಆದರೆ, ಚಿತ್ರ ನಿರ್ಮಿಸಿದ ಹೊಂಬಾಳೆ ಫಿಲಮ್ಸ್ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಧನ್ಯವಾದ ಸಲ್ಲಿಸದಿರುವುದು ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗೆ ಇವರಿಬ್ಬರ ನಡುವಿನ ಸಂಬಂಧಗಳಲ್ಲಿ ಬಿರುಕು ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಈ ನಡೆ ಇನ್ನಷ್ಟು ಸಂಶಯ ಹುಟ್ಟಿಸಿದೆ.
ಇದೇ ವೇಳೆ ರಿಷಬ್ ಶೆಟ್ಟಿ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ಜೈ ಹನುಮಾನ್ ನಲ್ಲಿ ನಟಿಸುತ್ತಿದ್ದು, ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ರಾಣಾ ದಗ್ಗುಬಾಟಿ ಕೂಡ ಈ ಸಿನಿಮಾದ ಭಾಗವಾಗಿದ್ದಾರೆ.
ರಿಷಬ್ ಶೆಟ್ಟಿ ತಮ್ಮದೇ ನಿರ್ಮಾಣ ಸಂಸ್ಥೆಯಡಿ ಹೊಸ ಸಿನಿಮಾವನ್ನು ಘೋಷಿಸಿರುವುದು, ಅವರ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.



