HomeIndia Newsಮಹಿಳೆಯರಿಗೆ ಅವಮಾನಿಸುವ ಉದ್ದೇಶ ಇರಲಿಲ್ಲ; ನನ್ನ ಭಾಷಣ ತಿರುಚಲಾಗಿದೆ ಎಂದ ಉದಯನಿಧಿ ಸ್ಟಾಲಿನ್

ಮಹಿಳೆಯರಿಗೆ ಅವಮಾನಿಸುವ ಉದ್ದೇಶ ಇರಲಿಲ್ಲ; ನನ್ನ ಭಾಷಣ ತಿರುಚಲಾಗಿದೆ ಎಂದ ಉದಯನಿಧಿ ಸ್ಟಾಲಿನ್

For Dai;y Updates Join Our whatsapp Group

ಚೆನ್ನೈ: ನಟಿ ತ್ರಿಷಾ ಕೃಷ್ಣನ್‌ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಂಜಾವೂರಿನಲ್ಲಿ ಪೊಲೀಸ್ ವಿಚಾರಣೆ ಎದುರಿಸಿದ ಬಳಿಕ ಬಿಡುಗಡೆಯಾದ ಡಿಎಂಕೆ ಹಿರಿಯ ನಾಯಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಟಿವಿಕೆ ಸರ್ಕಾರ ಮತ್ತು ಮುಖ್ಯಮಂತ್ರಿ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್ ಠಾಣೆಯಿಂದ ಹೊರಬಂದ ಬಳಿಕ ಬೆಂಬಲಿಗರು ಉದಯನಿಧಿ ಸ್ಟಾಲಿನ್ ಅವರಿಗೆ ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಅವರು, ತಮ್ಮ ಬಂಧನವನ್ನು ‘ಸರ್ಕಸ್ ಕ್ಯಾಂಪ್’ ಎಂದು ವ್ಯಂಗ್ಯವಾಡಿದರು. ಅಲ್ಲದೆ ಮುಖ್ಯಮಂತ್ರಿ ವಿಜಯ್ ಅವರನ್ನು ‘ಡಮ್ಮಿ ಮುಖ್ಯಮಂತ್ರಿ’ ಎಂದು ಟೀಕಿಸಿದರು.

ರಾಜ್ಯದ ರೈತರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಸರ್ಕಾರ, ಜನರ ಗಮನ ಬೇರೆಡೆ ಸೆಳೆಯಲು ಈ ಬಂಧನದ ನಾಟಕವಾಡಿದೆ ಎಂದು ಆರೋಪಿಸಿದರು.

ಕಾವೇರಿ ವಿಚಾರದಲ್ಲಿ ಟಿವಿಕೆ ಸರ್ಕಾರದ ವಿರುದ್ಧ ಆರೋಪ:

ಕಾವೇರಿ ನೀರಿನ ವಿಚಾರದಲ್ಲಿ ಟಿವಿಕೆ ಸರ್ಕಾರ ವಿಫಲವಾಗಿದೆ ಎಂದು ಉದಯನಿಧಿ ಸ್ಟಾಲಿನ್ ಆರೋಪಿಸಿದರು.

“ನನ್ನನ್ನು ಭಯೋತ್ಪಾದಕನಂತೆ ಕರೆದುಕೊಂಡು ಹೋದರು. ನಾನು ರೈತರ ಸಮಸ್ಯೆಗಳು, ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರಿನ ವಿವಾದದಲ್ಲಿ ಸರ್ಕಾರದ ವೈಫಲ್ಯಗಳನ್ನು ಮಾತ್ರ ಪ್ರಶ್ನಿಸಿದ್ದೆ” ಎಂದು ಹೇಳಿದರು.

ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಪ್ರತಿವರ್ಷ ಜೂನ್‌ 12ರಂದು ಮೆಟ್ಟೂರು ಅಣೆಕಟ್ಟಿನಿಂದ ರೈತರಿಗೆ ನೀರು ಬಿಡಲಾಗುತ್ತಿತ್ತು. ಆದರೆ ಈಗ ಹಲವು ತಿಂಗಳು ಕಳೆದರೂ ರೈತರಿಗೆ ನೀರು ಒದಗಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಕರ್ನಾಟಕ ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ಟಿವಿಕೆ ಪಕ್ಷಕ್ಕಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಹೇಳಿಕೆ ತಿರುಚಲಾಗಿದೆ ಎಂದು ಆರೋಪ:

ತಮ್ಮ ಭಾಷಣವನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ ಎಂದು ಉದಯನಿಧಿ ಸ್ಟಾಲಿನ್ ಆರೋಪಿಸಿದ್ದಾರೆ.

“ನನ್ನ ಭಾಷಣವನ್ನು ಕಟ್, ಕಾಪಿ, ಪೇಸ್ಟ್ ಮಾಡಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದೇನೆ ಎಂದು ಬಿಂಬಿಸಲಾಗಿದೆ. ನನ್ನ ಉದ್ದೇಶ ರೈತರಿಗೆ ನೀರು ಬೇಕು ಎನ್ನುವುದಾಗಿತ್ತು. ಮಹಿಳೆಯರನ್ನು ಅವಮಾನಿಸುವ ಯಾವುದೇ ಉದ್ದೇಶ ಇರಲಿಲ್ಲ” ಎಂದು ಸ್ಪಷ್ಟಪಡಿಸಿದರು.

ತಮಿಳುನಾಡಿನ ಪ್ರತಿಯೊಬ್ಬ ತಾಯಿ ಮತ್ತು ಸಹೋದರಿಯನ್ನು ತಮ್ಮ ಕುಟುಂಬದ ಸದಸ್ಯರಂತೆ ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img