ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಆಗಸ್ಟ್ 6 ಮತ್ತು 7ರಂದು ಗದಗ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿಗೆ ಸಂಬಂಧಿಸಿದ ಸಭೆ ನಡೆಸಲಿದ್ದಾರೆ.
ಆಗಸ್ಟ್ 6ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಪ್ರಕರಣಗಳ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಹೊಸ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಲೋಕಾಯುಕ್ತ ಕಚೇರಿ ಸ್ಪಷ್ಟಪಡಿಸಿದೆ.
ಆಗಸ್ಟ್ 7ರಂದು ಉಪಲೋಕಾಯುಕ್ತರು ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಹಾಗೂ ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



