HomeBelgaumರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ: ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ: ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

For Dai;y Updates Join Our whatsapp Group

Spread the love

ಬೆಳಗಾವಿ: ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಆಗಿರುವ ಬಿ.ವೈ ವಿಜಯೇಂದ್ರ ವಿಚಾರವಾಗಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿ.ವೈ ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಅಚ್ಛರಿ ಹೇಳಿಕೆ ನೀಡಿದ್ದಾರೆ.

ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು ಎಂದು ಲಿಂಬಾವಳಿ ಹೈಕಮಾಂಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ. ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸ್ತಿರಬಹುದು ಇವರು. ಅದಕ್ಕಾಗಿ ವಿಜಯೇಂದ್ರ ಹಾಗೂ ಆರ್. ಅಶೋಕ ನೇಮಕ ಮಾಡಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!