HomePolitics NewsYathindra Siddaramaiah: ಸಿಎಂ ಪುತ್ರನಿಂದಲೇ ಬಹಿರಂಗವಾಯ್ತು ಕರ್ನಾಟಕದ ಹೊಸ ʼನಾಯಕʼನ ಹೆಸರು!

Yathindra Siddaramaiah: ಸಿಎಂ ಪುತ್ರನಿಂದಲೇ ಬಹಿರಂಗವಾಯ್ತು ಕರ್ನಾಟಕದ ಹೊಸ ʼನಾಯಕʼನ ಹೆಸರು!

For Dai;y Updates Join Our whatsapp Group

Spread the love

ಬೆಳಗಾವಿ: ಯಾರ ಕುರ್ಚಿ ಅಲುಗಾಡಲಿದೆ? ಯಾವ ಸಚಿವರಿಗೆ ಕೊಕ್ ಕಾದಿದೆ? ಯಾವ ಹಿರಿ ತಲೆಯ ನಾಯಕರಿಗೆ ಎದುರಾಗುತ್ತೆ ಶಾಕ್? ನವೆಂಬರ್ ಕ್ರಾಂತಿಯೋ, ಇಲ್ಲ ಬ್ರಾಂತಿಯೋ? ನಾಯಕತ್ವ ಬದಲಾವಣೆ ಖಚಿತ ಅಂತಾ ಬಿಜೆಪಿಯವರು ನುಡಿಯುತ್ತಿರುವ ಭವಿಷ್ಯ ನಿಜವಾಗುತ್ತದೆಯಾ? ಈ ಎಲ್ಲಾ ಪ್ರಶ್ನೆಗಳು ಈಗ ಕರ್ನಾಟಕ ರಾಜಕೀಯದಲ್ಲಿ ಹೆಚ್ಚಾಗಿವೆ.

ಇದೆಲ್ಲರದ ಮಧ್ಯೆ ಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತು ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ.

ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್‌ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಹೇಳಿದ್ದಾರೆ. ಇವತ್ತು ತಂದೆಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ಈ ರೀತಿ ವೈಚಾರಿಕವಾಗಿ ಪ್ರಗತಿಪರವಾಗಿ ಸಿದ್ದಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶಶನ, ನೇತೃತ್ವ ವಹಿಸಿಕೊಳ್ಳಲು ಒಬ್ಬ ನಾಯಕ ಬೇಕು. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿ ವಹಿಸಿಕೊಳ್ಳಲು ಸಮರ್ಥರಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ದಾಂತದಲ್ಲಿ ನಂಬಿಕೆ ಇಟ್ಟುಕೊಂಡಿರುವ ಎಲ್ಲಾ ರಾಜಕಾರಣಿಗಳಿಗೆ ಮಾದರಿಯಾಗಿ ನಮ್ಮನ್ನು ಮುನ್ನಡೆಸುವ ನಂಬಿಕೆ ಇದೆ. ತತ್ವ ಬದ್ಧತೆ ಇರುವ ನಾಯಕರು ಸಿಗುವುದು ಬಹಳ ಕಷ್ಟ. ಅಂತಹ ಕೆಲಸವನ್ನು ಜಾರಕಿಹೊಳಿ ಮಾಡುತ್ತಿದ್ದಾರೆ. ಆ ಕೆಲಸ ಇದೇ ರೀತಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!