HomeIndia Newsಸಿಎಂ ಬದಲಾವಣೆ ಕೂಗಿಗೆ ಬಿಎಸ್ ವೈ ಹೇಳಿದ್ದೇನು?

ಸಿಎಂ ಬದಲಾವಣೆ ಕೂಗಿಗೆ ಬಿಎಸ್ ವೈ ಹೇಳಿದ್ದೇನು?

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಬಿಜೆಪಿಯ ಕೆಲ ನಾಯಕರು ಸಿಎಂ ಬದಲಾವಣೆಗೆ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ, ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮಣಿಸುತ್ತಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ವಿರೋಧಿ ಬಣದ ನಾಯಕರಿಗೆ ಒಂದೇ ಮಾತಿನಲ್ಲಿ ಬಿಸಿ ಮುಟ್ಟಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ವಿರೋಧಿ ಬಣಗಳಿಗೆ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಜನರು ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ, ಸಾಕಷ್ಟು ಸಾವುನೋವುಗಳು ಸಂಭವಿಸುತ್ತಿರುವ ಈ ಹೊತ್ತಲ್ಲಿ ನಾವು ಅವರ ಪರವಾಗಿ ಕೆಲಸ ಮಾಡಬೇಕು. ಇಂತಹ ಸಂದರ್ಭದಲ್ಲಿ ಸಚಿವರು, ಶಾಸಕರು ಎಲ್ಲರೂ ಒಗ್ಗಟ್ಟಾಗಿ ಜನರ ಸಂಕಷ್ಟ ನಿವಾರಿಸುವತ್ತ ಗಮನಕೊಡಬೇಕೇ ಹೊರತು ಬೇರೆ ವಿಚಾರಗಳ ಬಗ್ಗೆ ಅಲ್ಲ ಎಂದು ಸಿಎಂ ಬದಲಾವಣೆಯ ಕಸರತ್ತು ನಡೆಸುತ್ತಿರುವ ವಿರೋಧಿ ಬಣಕ್ಕೆ ಬಿಎಸ್ ವೈ ತಿರುಗೇಟು ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img