ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿಕ್ಕಬಳ್ಳಾಪುರ: ಅಂಗಡಿ ಮುಂದೆ ಉಗುಳಿದ್ದಕ್ಕೆ ಯುವಕನ ಕೊಲೆ ನಡೆದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಊಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮುನಿಕೃಷ್ಣ(23) ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಅದೇ ಗ್ರಾಮದ ಚೇತನ್ ಎಂಬಾತನ ಅಂಗಡಿಗೆ ಬಂದಿದ್ದ ಮುನಿಕೃಷ್ಣ ಅಂಗಡಿಯ ಮುಂದೆ ಉಗುಳಿದ್ದಾನೆ.
ಇದರಿಂದ ಕುಪಿತಗೊಂಡ ಚೇತನ್, ಮುನಿಕೃಷ್ಣನೊಂದಿಗೆ ಜಗಳವಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿ, ಮುನಿಕೃಷ್ಣನನ್ನು ಚೇತನ್ ಚಾಕುವಿನಿಂದ ಇರಿದು ಕೊಲೆ ಮಾಡುವ ಮೂಲಕ ಅಂತ್ಯಗೊಂಡಿದೆ.
![](http://vijayasakshi.com/wp-content/uploads/2020/09/img_20200923_242511915775184306713645.jpg)
ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸಪ್ಪ, ಪಿಎಸ್ಐ ನರೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಚೇತನ್ ನನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ಕೊಲೆಯಾದ ಮುನಿಕೃಷ್ಣ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.