28.3 C
Gadag
Sunday, December 3, 2023

ಅಂಜನಾದ್ರಿ, ದುರ್ಗಾ ಪರಮೇಶ್ವರಿ ಬೆಟ್ಟಕ್ಕೆ ಟಾಲಿವುಡ್ ಸ್ಟಾರ್ ಶ್ರೀಕಾಂತ್ ಭೇಟಿ

Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ತೆಲುಗು ಚಿತ್ರರಂಗದ ನಟ, ನಿರ್ಮಾಪಕ ಶ್ರೀಕಾಂತ್, ಜಿಲ್ಲೆಯ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಹೇಮಗುಡ್ಡದ ಬಳಿಯಿರುವ ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯಿಸುತ್ತಿರುವ ಜೇಮ್ಸ್ ಚಿತ್ರ ಸಿನಿಮಾದ ಚಿತ್ರೀಕರಣ ತಾಲೂಕಿನ ಮಲ್ಲಾಪುರದಲ್ಲಿ ನಡೆಯುತ್ತಿದ್ದು, ಈ ಚಿತ್ರದಲ್ಲಿ ಶ್ರೀಕಾಂತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಶ್ರೀಕಾಂತ್ ಹೈದರಾಬಾದ್ನಿಂದ ಆಗಮಿಸಿದ್ದಾರೆ.
ಶ್ರೀಕಾಂತ್ ಮೂಲತಃ ಗಂಗಾವತಿ ತಾಲೂಕಿನ ಬಸವಪಟ್ಟಣ ನಿವಾಸಿಯಾದ ಇವರು, ಕಳೆದ ಎರಡು ದಶಕಗಳ ಹಿಂದೆಯೇ ಹೈದರಾಬಾದ್ಗೆ ವಲಸೆ ಹೋಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts