21.4 C
Gadag
Wednesday, September 27, 2023

ಅಂಡರ್ ಪಾಸ್ ಸ್ವಚ್ಛಗೊಳಿಸಿ ಆಪ್ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹುಬ್ಬಳ್ಳಿ
ಸನಾ ಕಾಲೇಜು ಪಕ್ಕದ ಬಿ.ಆರ್.ಟಿ.ಎಸ್. ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ ಮಾಡಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಶುಕ್ರವಾರ ಅಂಡರ್ ಪಾಸ್ ಸ್ವಚ್ಛಗೊಳಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು.
ಇಲ್ಲಿನ ಬೈರಿದೇವರಕೊಪ್ಪದ ಸನಾ ಕಾಲೇಜು ಪಕ್ಕದ ಬಿ.ಆರ್.ಟಿ.ಎಸ್. ಅಂಡರ್ ಪಾಸ್ ಸಂಪೂರ್ಣ ಹದಗೆಟ್ಟಿದ್ದು, ಜನರು ಪ್ರಾಣ ಅಂಗೈಯಲ್ಲಿ ಹಿಡಿದು ರಸ್ತೆ ದಾಟುವಂತಾಗಿದೆ.
ಯೋಜನೆಯಲ್ಲಿ ಏಕೈಕ ಅಂಡರ್ ಪಾಸ್ ಇದ್ದರೂ ಅದರ ನಿರ್ವಹಣೆಯಲ್ಲಿ ಬಿ.ಆರ್.ಟಿ.ಎಸ್. ಎಡವಿದೆ. ಒಂದು ವರ್ಷದಿಂದ ಅಂಡರ್ ಪಾಸ್ ನಲ್ಲಿ ನೀರು ನಿಂತು ಕೆರೆಯಂತಾಗಿದೆ. ಬಿ.ಆರ್.ಟಿ.ಎಸ್. ಬಸ್ ನಿಲ್ದಾಣದಿಂದ ಬಸ್ಸಿಳಿದು ರಸ್ತೆ ದಾಟಲು ಕಷ್ಟವಾಗುತ್ತಿದ್ದು, ಇದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಂಡರ್ ಪಾಸ್ ಸ್ವಚ್ಛಗೊಳಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದೇವೆ. ಸ್ವಚ್ಛ ಭಾರತ ಜಪ ಮಾಡುವ ನಾಯಕರಿಗೆ ಬಿ.ಆರ್.ಟಿ.ಎಸ್. ಅಂಡರ್ ಪಾಸ್ ಕಣ್ಣಿಗೆ ಬಿದ್ದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು, ಕೇಂದ್ರ ಸಚಿವರು ಹಾಗೂ ಶಾಸಕರು ಕಾಡಿಡಾರ್ ಗೆ ಭೇಟಿ ನೀಡಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಾಗಬೇಕೆದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಆಗ್ರಹಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ, ಕಾರ್ಯಕಾರಿ ಸಮಿತಿಯ ಸದಸ್ಯ ಅನಂತಕುಮಾರ ಭಾರತೀಯ, ಪಶ್ಚಿಮ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಶಶಿಕುಮಾರ್ ಸುಳ್ಳದ, ಲಕ್ಷ್ಮಣ ರಾಥೋಡ, ವಿ.ವಿ. ಮಾಗನೂರ, ಶಿವಲಿಂಗಪ್ಪ ಜಡೇನವರ, ಭೀಮಸಿ ಪೂಜಾರ, ಯುವ ಘಟಕದ ಉಸ್ತುವಾರಿ ಡೇನಿಯಲ್ ಐಕೋಸ್, ವೀರೇಂದ್ರ ಸಾಂಬ್ರಾಣಿ, ಲತಾ, ಶಿವಕಿರಣ ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!