28.7 C
Gadag
Friday, September 22, 2023

ಅಂತರಾಜ್ಯ ಡಕಾಯಿತರ ಬಂಧನ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ
ಸೋಮವಾರ ಶಿರಹಟ್ಟಿ ಪೋಲೀಸರಿಂದ ಶಿರಹಟ್ಟಿ ತಾಲೂಕು ಸೇರಿದಂತೆ ಅಂತರಾಜ್ಯದ ಕಳ್ಳತನದಲ್ಲಿ ಭಾಗಿಯಾಗಿದ್ದಂತಹ ಆರು ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಅಮರೇಶ ಮೋಡಕೇರ, ಉಪೇಂದ್ರ ಮೋಡಕೇರ, ಪರಶುರಾಮ ಮೋಡಕೇರ, ಲಕ್ಷ್ಮಣ ಮೋಡಕೇರ, ಮಾರುತಿ ಮೋಡಕೇರ, ರಾಜಾಭಕ್ಷಿ ಮಕಾನದಾರ ಈ ಆರು ಜನ ಬಂಧಿತ ಆರೋಪಿತರಾಗಿದ್ದಾರೆ.
ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಕುರಿ ಕಳ್ಳತನ, ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ, ವೆಂಕಟಾಪೂರದಲ್ಲಿ ದರೋಡೆ, ಸಿಂಧನೂರಿನಲ್ಲಿ ದರೋಡೆ, ರಾತ್ರಿ ವೇಳೆ ರಸ್ತೆಯಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುವುದು, ಆಂಧ್ರಪ್ರದೇಶದ ಕರ್ನೂಲ ಜಿಲ್ಲಾ ಕವತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿರುವಂತಹ ಸಂದರ್ಭದಲ್ಲಿ ಬೋಲೆರೋ ವಾಹನ ಬಿಟ್ಟು ಪರಾರಿಯಾಗಿದ್ದ ಖಚಿತ ಸುಳಿವಿನ ಮೇರೆಗೆ ಇವರನ್ನು ಬಂಧಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್. ಅವರ ನಿರ್ದೇಶನದ ಮೇರೆಗೆ ಡಿಎಸ್‌ಪಿ ಪ್ರಹ್ಲಾದ ಎಸ್.ಕೆ ನೇತೃತ್ವದಲ್ಲಿ ಶಿರಹಟ್ಟಿ ಸಿಪಿಐ ವಿಕಾಸ ಲಮಾಣಿ, ಗದಗ ಗ್ರಾಮೀಣ ಸಿಪಿಐ ರವಿ ಕಪ್ಪತ್ತನವರ, ಶಿರಹಟ್ಟಿ ಪಿಎಸ್‌ಐ ಸುನೀಲಕುಮಾರ ನಾಯ್ಕ, ಲಕ್ಷ್ಮೇಶ್ವರ ಪಿಎಸ್‌ಐ ಶಿವಕುಮಾರ ಲೋಹಾರ ಮತ್ತು ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಪ್ರಸನ್ನ ರಂಗ್ರೇಜ, ದಾದಾಖಲಂದರ ನದಾಫ್, ಗಣೇಶ ಗ್ರಾಮಪುರೋಹಿತ, ಎಂ.ಬಿ.ವಡ್ಡಟ್ಟಿ, ಯರಗಟ್ಟಿ, ಥೋರಾತ, ಯಕಾಸಿ, ಇನಾಮತಿ, ಬೂದಿಹಾಳ, ದೊಡ್ಡಮನಿ, ಹೊಸಮನಿ, ಯಳವತ್ತಿ, ಮಹದೇವ ಮುಂತಾದವರು ಭಾಗಿಯಾಗಿದ್ದರು.
 


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!