ಅಂದರ್-ಬಾಹರ್- ಜೂಜಾಟ: ಚಾಲಕ ಸೇರಿ ಐವರ ಬಂಧನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಚಾಲಕ‌ ಸೇರಿದಂತೆ ಐದು ಜನ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರು ದಾಳಿ ಬಂಧಿಸಿ ಅವರಿಂದ 2500 ಕ್ಕೂ ಹೆಚ್ಚು ಹಣ ವಶಪಡಿಸಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆದಿದೆ.

ಖಚಿತ ಮಾಹಿತಿ ಪಡೆದ ಪಿಎಸ್ಐ ಗುರುಶಾಂತ ದಾಸ್ಯಾಳ ಹಾಗೂ ಸಿಬ್ಬಂದಿ ಇಲ್ಲಿನ ಗೌಡಗೇರಿ ರಸ್ತೆಯಲ್ಲಿ ಇರುವ ಪುರಸಭೆಯ ಕಸ ವಿಲೇವಾರಿ ಸ್ಥಳದ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಚಾಲಕ ಪ್ರಭು ಯಲ್ಲಪ್ಪ ಕಲಾಲ್, ಕಳಕಪ್ಪ ಮಹಾಂತಪ್ಪ ಮಂಗಳೂರು, ಈರಪ್ಪ ರಾಮಣ್ಣ ಭಜಂತ್ರಿ, ರಾಮಪ್ಪ ದುರಗಪ್ಪ ಶಿಗ್ಗಾಂವಿ, ಬಸೆಟ್ಟೆಪ್ಪ ಮಹಾಬಲೇಶ್ವರ ಸಂಗಮದ ಎಂಬುವರನ್ನು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here