22.8 C
Gadag
Saturday, December 9, 2023

ಅಖಿಲ ಕರ್ನಾಟಕ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಗೊಲ್ಲ ಜನಾಂಗದಲ್ಲಿ ಸುಮಾರು 34 ಒಳಪಂಗಡಗಳು ಇದ್ದುದ್ದನ್ನು ಒಡೆಯದೇ ಒಂದೇ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದು ಸೂಕ್ತ ಎಂದು ಗಂಗಾವತಿ ತಾಲೂಕು ಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಪ್ರಣವಾನಂದ ಯಾದವ ಇವರು ಅಭಿಪ್ರಾಯಪಟ್ಟಿದ್ದಾರೆ.
ಅವರು ‘ಅಖಿಲ ಕರ್ನಾಟಕ ಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಗಾಗಿ ಒತ್ತಾಯಿಸಿ ಜಿಲ್ಲೆಯ ಗಂಗಾವತಿ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ, ಈ ಹಿಂದಿನ ಸಿದ್ದರಾಮಯ್ಯನವರ ಸರ್ಕಾರವು ಪ್ರತ್ಯೇಕ ಲಿಂಗಾಯತ ಧರ್ಮ ಘೋಷಣೆ ಮಾಡ್ತೀನಿ ಅಂದಾಗ ವೀರಶೈವ ಸಮಾಜದವರು, ಹಿರಿಯ ಮುಂಖಡರು, ರಾಜಕೀಯ ಮುಖಂಡರು ಸೇರಿದಂತೆ ಈಗಿನ ಸಿಎಂ ಯಡಿಯೂರಪ್ಪರವರು ಸಮಾಜವನ್ನು ಒಡೆಯುತ್ತಿರುವುದು ಎಷ್ಟು ಸಮಂಜಸ ಎಂದು ಧ್ವನಿಯೆತ್ತಿದ್ದರು.
ಆದರೆ ಇದೀಗ ಕರ್ನಾಟಕದಲ್ಲಿ ಸುಮಾರು 40 ಲಕ್ಷ ಜನಸಂಖ್ಯೆ ಇರುವ ನಮ್ಮ ಗೊಲ್ಲ ಸಮಾಜವನ್ನು ತಮ್ಮ ಉಪಚುನಾವಣೆಗೋಸ್ಕರ ಸುಮಾರು 6 ಲಕ್ಷ ಜನಸಂಖ್ಯೆ ಇರುವ 3 ಜಿಲ್ಲೆಗಳನ್ನು ಮಾತ್ರ ಪರಿಗಣಿಸುವುದ ಎಷ್ಟು ಸೂಕ್ತ? ಬೇರೆ ಬೇರೆ ಜಿಲ್ಲೆಗಳಲ್ಲಿ ಮುಂಬರುವ ಚುನಾವಣೆಗಳಿಗೆ ಉಳಿದ ಸುಮಾರು 34 ಲಕ್ಷ ಜನಸಂಖ್ಯೆಯ ಮತಗಳು ಬೇಡವೆಂದು ಅಥವಾ ಅವರ ಅಭಿವೃದ್ಧಿಯನ್ನು ಕಡೆಗಣಿಸುವುದು ಸರಿಯಲ್ಲ. ಇದು ನಮ್ಮ ಮೇಲೆ ಮಲತಾಯಿ ಧೋರಣೆ ಮಾಡಿದಂತಾಗುತ್ತದೆ.
ಕಾರಣ ಗೊಲ್ಲ ಸಮಾಜದ ಕ್ಷೇಮಾಭಿವೃದ್ಧಿಗಾಗಿ ‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ದ ಬದಲಾಗಿ ‘ಅಖಿಲ ಕರ್ನಾಟಕ ಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಬೇಕು. ಇಲ್ಲದಿದ್ದಲ್ಲಿ ನಮ್ಮ ಸಮಾಜದ ಹಿರಿಯೂರು ಕ್ಷೇತ್ರದ ಶಾಸಕಿಯಾದ ಪೂರ್ಣಿಮಾ ಶ್ರೀನಿವಾಸ ಅವರೊಂದಿಗೆ ಸಮಸ್ತ ಕರ್ನಾಟಕ ಗೊಲ್ಲ ಸಮಾಜದವರು ಸೇರಿ ಗೊಲ್ಲ ಸಮಾಜವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗಂಗಾವತಿ ತಾಲೂಕು ಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಕೊಲ್ಲಾರಿ ದುರುಗಪ್ಪ, ಕತ್ತಿ ಹನುಮಂತ, ಕೃಷ್ಣ ವಡ್ಡರಹಟ್ಟಿ, ಮಾಮಳಿ ಹನುಮಂತ ಮುಕ್ಕುಂಪಿ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಬಿ.ಎಂ. ವೆಂಕಟೇಶ ಆನೆಗೊಂದಿ, ಗೋವಿಂದಪ್ಪ ಸಾಯಿನಗರ, ಯಮನೂರ ಪಾಟೀಲ್, ಪರಶುರಾಮ ಮಲ್ಲಾಪುರ, ಪಾಮಣ್ಣ ಹಾಗೂ ಯಂಕಪ್ಪ ಹೆಚ್.ಆರ್.ಜಿ ನಗರ, ಯಡೆಹಳ್ಳಿ ಬಸಣ್ಣ, ಸಣ್ಣ ಕರಡೆಪ್ಪ ಗುರುವಿನ್, ಹನುಮಂತ ಹಾಗೂ ನಾಗರಾಜ ಹಣವಾಳ, ರಾಮಣ್ಣ ವೆಂಕಟಗಿರಿ ಸೇರಿದಂತೆ ಯಾದವ ಸಮಾಜದ ಬಾಂಧವರು ಉಪಸ್ಥಿತರಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts