HomeGadag Newsಅಡುಗೆ, ರಸಪ್ರಶ್ನೆ ಕಾರ್ಯಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ

ಅಡುಗೆ, ರಸಪ್ರಶ್ನೆ ಕಾರ್ಯಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನರಗುಂದ ಹಾಗೂ ಗ್ರಾಮ ಪಂಚಾಯತಿ ಚಿಕ್ಕನರಗುಂದ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುತ್ತು ರಾಯರಡ್ಡಿ, ನಮ್ಮ ಗ್ರಾಮದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಗರ್ಭಿಣಿ, ಬಾಣಂತಿಯರಿಗೆ ರಸಪ್ರಶ್ನೆ, ಪೌಷ್ಟಿಕ ಆಹಾರ ತಯಾರಿಕಾ ಸ್ಪರ್ಧೆ ಹಾಗೂ ಮೊದಲ ಗರ್ಭಿಣಿಯರಿಗೆ ನಡೆದ ಸೀಮಂತ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆದಿದ್ದು ಶ್ಲಾಘನೀಯ ಎಂದರು.

ಶಿಶು ಅಭಿವೃಧ್ದಿ ಅಧಿಕಾರಿ ರೂಪಾ ಗಂಧದ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದ್ದು ಪ್ರಶಂಸನೀಯ ಎಂದರು.

ಮಹಿಳೆಯರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಗರ್ಭಿಣಿ, ಬಾಣಂತಿಯರ ಮಕ್ಕಳ ಆರೋಗ್ಯದ ಬಗ್ಗೆ ಆಹಾರ ಪದ್ದತಿ ಹೇಗಿರಬೇಕು ಎಂಬುದನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮುತ್ತು ರಾಯರಡ್ಡಿ ಹೇಳಿದರು.

ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ರೂಪಾ ಗಂಧದ ಮಾತನಾಡಿ, ವಿಶೇಷವಾಗಿ ಗರ್ಭಿಣಿ ಮಹಿಳೆಯರ ಹಾಗೂ ಮಕ್ಕಳ ಆರೋಗ್ಯ ಕಾಪಾಡುವ ಸಲುವಾಗಿ ಇರುವ ಸರಕಾರದ ಹಲವಾರು ಯೋಜನೆಯಗಳ ಸದುಪಯೋಗ ಪಡೆದುಕೊಳ್ಳಲು ಹಾಗೂ ಪಂಚಸೂತ್ರಗಳ ಬಗ್ಗೆ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಯ ಶರಾವತಿ ಹಿರೇಮಠ ಮಾತನಾಡಿ, ಮನುಷ್ಯನ ದೇಹ ಮತ್ತು ಮೆದುಳಿನ ಬೆಳವಣಿಗೆಗೆ ಜೀವಸತ್ವ, ಪೌಷ್ಠಿಕಾಂಶಗಳು ಬಹುಮುಖ್ಯ ಪಾತ್ರ ವಹಿಸುತ್ತವೆ.

ಅದರಲ್ಲೂ ಗರ್ಭಿಣಿ, ಬಾಣಂತಿಯರು, ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ತುಂಬಾ ಮುಖ್ಯವಾಗಿರುತ್ತದೆ. ಇದರ ಜೊತೆಗೆ ಕೊಬ್ಬಿನಾಂಶದ ಮಾತ್ರೆಗಳು ಮತ್ತು ವಯಸ್ಸಿಗೆ ಅನುಗುಣವಾಗಿ ಲಸಿಕೆಯನ್ನು ತೆಗೆದುಕೊಳ್ಳುವದರಿಂದ ಆರೋಗ್ಯವಂತ ಶಿಶುವನ್ನು ಪಡೆಯಬಹುದು ನೀವು ಕೂಡ ಆರೋಗ್ಯದಿಂದರಬಹುದು ಎಂದು ತಿಳಿಸಿದರು.

ಪೋಷಣ್ ಅಭಿಯಾನದ ಕಾರ್ಯಕ್ರಮ ಸಂಯೋಜಕ ಮಂಜು ಗುಗ್ರಿ, ಮೇಲ್ವಿಚಾರಕಿ ಅನ್ನಪೂರ್ಣ ಹಡಪದ‌, ಹಾಗೂ ಗ್ರಾ.ಪಂ ಸರ್ವಸದಸ್ಯರು ರಸಪ್ರಶ್ನೆ ಸ್ಪರ್ಧೆ ವಿಕ್ಷಣೆ ಹಾಗೂ ಅಡುಗೆ ರುಚಿ ನೋಡಿ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಘೋಷಿಸಿದರು.

ಕಾರ್ಯಕ್ರಮದಲ್ಲಿ ಶಿವಲೀಲಾ ಹಿರೇಮಠ ಸ್ವಾಗತಿಸಿ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ಲಕ್ಷ್ಮಣ ಕಂಬಳಿ, ಬಾಪು ಹಿರೇಗೌಡ್ರ, ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶಂಕ್ರಮ್ಮ ಚಲವಾದಿ, ಶಿಕ್ಷಕಿಯರಾದ ಎಸ್.ವ್ಹಿ.ಮಣ್ಣೂರ, ಆರೋಗ್ಯ ಇಲಾಖೆಯ ಶರಾವತಿ ಹಿರೇಮಠ, ಬಾಗ್ಯಜ್ಯೋತಿ, ಅಂಗನವಾಡಿ ಕಾರ್ಯಕರ್ತೆಯರಾದ ಮಂಜುಳಾ ಮೇಟಿ, ಭಾರತಿ ಪಾಟೀಲ್, ಸವಿತಾ ರಾಯರಡ್ಡಿ, ಗೀತಾ ಕಾಡದೇವರಮಠ, ವಿಜಯಲಕ್ಷ್ಮಿ ಹಿರೇಮಠ, ನೀಲಗಂಗಾ ಮಾದರ,


ಬೆನಕನಕೊಪ್ಪ, ಹಿರೆಕೊಪ್ಪ, ಸಂಕದಾಳ, ಸುರಕೋಡ ಗ್ರಾಮದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!