22.8 C
Gadag
Saturday, December 9, 2023

ಅನೈತಿಕ ಸಂಬಂಧದ ಶಂಕೆ; ಪತಿಯಿಂದ ಪತ್ನಿ ಕೊಲೆ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ವಿನಾಕಾರಣ ಪತಿ ಮಹಾಶಯನೊಬ್ಬ ಹೆಂಡತಿ ಮೇಲೆ ಸಂಶಯ ಪಟ್ಟು ಕೊಲೆ ಮಾಡಿರುವ ಘಟನೆ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪರಶುರಾಮ ಹುಚ್ಚೀರಪ್ಪ ಹಳ್ಳಿಕೇರಿ ಎಂಬ ವ್ಯಕ್ತಿ ಕೊಲೆಗೈದಿದ್ದು, ಪತ್ನಿ ರೇಖಾ ಪರಶುರಾಮ ಹಳ್ಳಿಕೇರಿ ಮೃತ ದುರ್ದೈವಿಯಾಗಿದ್ದಾಳೆ.

ನಿನ್ನೆ ಪರಶುರಾಮ ಹೆಂಡತಿ ರೇಖಾಳನ್ನು ಕರೆದುಕೊಂಡು ಕುರಿ ಮೇಯಿಸಲು ಹೋಗಿದ್ದಾನೆ. ಈ ವೇಳೆ ಹೆಂಡತಿ ಜೊತೆ ಮಾತಿಗೆ ಮಾತು ಬೆಳೆದು ಇಬ್ಬರು ಜಗಳವಾಡಿದ್ದಾರೆ.

ಜಗಳದಲ್ಲಿ ಹೆಂಡತಿಗೆ ಒಂದೇಟು ಹೊಡೆದಿದ್ದು, ಇಬ್ಬರ ನಡುವಿನ ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ ಪರಶುರಾಮ ಹೆಂಡತಿಗೆ ಬಲವಾಗಿ ಆಯಕಟ್ಟಿನ ಜಾಗಕ್ಕೆ ಕಾಲಿನಿಂದ ಒದ್ದಿದ್ದು, ಹೆಂಡತಿ ರೇಖಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಪರುಶುರಾಮನಿಗೆ ವಿನಾಕಾರಣ ಅನುಮಾನ ಪಡದಂತೆ ಅನೇಕ ಬಾರಿ ಬುದ್ದಿ ಮಾತು ಹೇಳಲಾಗಿತ್ತಂತೆ. ಆದರೂ, ಪರಶುರಾಮ ತನ್ನ ಹಳೆ ಚಾಳಿ ಬಿಟ್ಟಿರಲಿಲ್ಲವಂತೆ.

ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಪರಶುರಾಮ ನನ್ನು ಬಂಧಿಸಿದ್ದಾರೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts