HomeCrime Newsಅನೈತಿಕ ಸಂಬಂಧ ; ಮಾರಾಕಾಸ್ತ್ರದಿಂದ ಯುವಕನ ಕೊಲೆ‌

ಅನೈತಿಕ ಸಂಬಂಧ ; ಮಾರಾಕಾಸ್ತ್ರದಿಂದ ಯುವಕನ ಕೊಲೆ‌

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ

ಮಾರಾಕಾಸ್ತ್ರದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ಜಮೀನಿನಲ್ಲಿ ಎಸೆದಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ ತಳಗೇರಿ (೩೦) ಎಂಬಾತನೇ ಕೊಲೆಯಾದ ಯುವಕನಾಗಿದ್ದು, ಮದ್ಯರಾತ್ರಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಎಸ್.ಪಿ ಯತೀಶ್ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೀಡಾದ ಯುವಕನಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಕುಟುಂಬ ಕಲಹದಿಂದಾಗಿ ಈ ಕೊಲೆ‌ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣದಿಂದ ಸೂರಣಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಶಯಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img