ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: ಜೋಳದ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋವಿನ ಜೋಳದ ಬೆಳೆ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಸಂಜೀವಪ್ಪ ದೇವಪ್ಪ ಗುಂಡಿಕೇರಿ ಬಂಧಿತ ಆರೋಪಿಯಾಗಿದ್ದಾನೆ.

ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ಜಮೀನಿನಲ್ಲಿ ಗೋವಿನ ಜೋಳದ ಮಧ್ಯೆ ಬೆಳೆದಿದ್ದ 1.250 ಕೆಜಿ ಗಾಂಜಾ ಬೆಳೆಯನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿತನನ್ನು ಮಾಲು ಸಮೇತ ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here