ಅಬಕಾರಿ ಪೊಲೀಸರ ದಾಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಆರೋಪಿ ಸಮೇತ 10 ಸಾವಿರ ರೂ, ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಈರಪ್ಪ ಯಲ್ಲಪ್ಪ ಪೂಜಾರ ಎಂದು ಗುರುತಿಸಲಾಗಿದ್ದು, ಬಂಧಿತನ ವಿರುದ್ಧ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮನೆಯಲ್ಲೇ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಪೊಲೀಸರು ಈ ದಾಳಿ ನಡೆಸಿದ್ದರು.

ಅಬಕಾರಿ ಡಿಸಿ ಮೋತಿಲಾಲ್ ನಿರ್ದೇಶನ ಮೇರೆಗೆ ಡಿಎಎಸ್ಪಿ ಮಂಜುನಾಥ್ ಮಾಲಿಪಾಟೀಲ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಮಲ್ಲಿಕಾರ್ಜುನ ರೆಡ್ಡಿ, ನಾರಾಯಣ ಪವಾರ್ ಸಿಬ್ಬಂದಿಗಳಾದ ಗಿರೀಶ್ ರೆಡ್ಡಿ, ಮಂಜುನಾಥ್ ಗೌಡ್, ನಜೀರಸಾಬ್, ಚಂದ್ರು ರಾಥೋಡ್ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here