ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ: ಕಾಡು ಪ್ರಾಣಿ ಬೇಟೆಗಾರನ ಬಂಧನ

0
Spread the love

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಮುಳ್ಳುಹಂದಿ ಸೇರಿದಂತೆ ವಿವಿಧ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರ ಮೇಲೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಜಿಲ್ಲೆಯ ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಜಡೇಗೌಡ ( 53 ) ಬಂಧಿತ ಆರೋಪಿಯಾಗಿದ್ದಾನೆ. ಅದೇ ಗ್ರಾಮದ ಜೆ.ಮುನಿರಾಜು ಹಾಗೂ ಮುತ್ತು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಪ್ರಾಣಿಗಳನ್ನು ಬೇಟೆಯಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದಾಗ ಇಬ್ಬರು ಆರೋಪಿಗಳು ಪರಾರಿಯಾಗಿದ್ದು , ಓರ್ವ ಆರೋಪಿಯನ್ನು ಬಂಧಿಸಿ, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ಮುಳ್ಳುಹಂದಿ ಹಾಗೂ ಕಾಡುಹಂದಿಯ ಮಾಂಸ, ಒಂದು ಬೈಕ್ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು , ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ .

ದಾಳಿಯಲ್ಲಿ ಅರಣ್ಯ ಸಂಚಾರಿ ದಳದ ಹೆಡ್‌ಕಾನ್‌ಸ್ಟೇಬಲ್ ಗಳಾದ ಲೋಕೇಶ್, ಶಂಕರ, ತಮೀವುಲ್ಲಾ, ಬಸವರಾಜು, ಕುಮಾರಸ್ವಾಮಿ, ಸ್ವಾಮಿ, ರಾಮಚಂದ್ರ ಹಾಗೂ ಚಾಲಕ ಜಾಫರ್ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here