ಅರಬ್ಬಿ ಸಮುದ್ರದಲ್ಲಿ ಚಂಡಮಾರುತ – ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಲ್ಭಣಗೊಂಡಿದ್ದರ ಪರಿಣಾಮ ಇಂದು ಹಾಗೂ ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಣಾಮ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿನ ಜನರಿಗೆ ಈಗಾಗಲೇ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈ ಜಿಲ್ಲೆಯಲ್ಲಿ ಇಂದು ಹಾಗೂ ನಾಳೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿ ಇಂದು ಯೆಲ್ಲೋ ಅಲರ್ಟ್ ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ನಾಳೆ ಕೊಡಗಿನಲ್ಲಿ 204 ಮೀ.ಮೀನಷ್ಟು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಬಾಗಮಂಡಲ, ಕೋರಂಗಾಲ ಸುತ್ತಮುತ್ತ ಭಾರೀ ಮಳೆ ಸಾಧ್ಯತೆ ಇದೆ ಎಂದು ಆಟೋಗಳಲ್ಲಿ ಮೈಕ್ ಕಟ್ಟಿ ಜಿಲ್ಲಾಡಳಿತ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ. ಎರಡು ದಿನಗಳ ಕಾಲ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಹ ಸೂಚನೆ ನೀಡಿದೆ.


Spread the love

LEAVE A REPLY

Please enter your comment!
Please enter your name here