ವಿಜಯಸಾಕ್ಷಿ ಸುದ್ದಿ, ಉಡುಪಿ
Advertisement
ಪಾಲ್ಸ್ ನಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿರುವ ಅರ್ಭಿ ಫಾಲ್ಸ್ ನಲ್ಲಿ ಇಂದು ನಡೆದಿದೆ.
ಮಂಗಳೂರು ಮೂಲದ ವರ್ಷಿತಾ ಮೃತ ಬಾಲಕಿ. ಕಾರ್ಕಳದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಯೊಟೆಕ್ ವ್ಯಾಸಂಗ ಮಾಡುತ್ತಿದ್ದ ವರ್ಷಿತಾ ವಿದ್ಯಾರ್ಥಿಗಳಿಬ್ಬರ ಜೊತೆ ಪಾಲ್ಸ್ ಗೆ ತೆರಳಿದ್ದಳು. ಈ ವೇಳೆ ಈಜಲೆಂದು ನೀರಿಗೆ ಇಳಿದಿದ್ದಾಗ ಸೆಳೆತಕ್ಕೆ ಸಿಲುಕಿ ಮುಳುಗಿ ಮೃತಪಟ್ಟಿದ್ದಾಳೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಾಯಕಾರಿ ಅರ್ಭಿ ಫಾಲ್ಸ್ ನಿಷೇಧಿತ ಪ್ರದೇಶವಾಗಿದೆ.