ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನ ಕಡಿತ: ಸರಕಾರದ ನೀತಿಗೆ ಸೈಯದ್ ಕೊಪ್ಪಳ ಆಕ್ರೋಶ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ:

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಕಡಿತ ಮಾಡಿರುವುದು ಇಡೀ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ ಸಮುದಾಯಗಳ ಅಭಿವೃದ್ದಿಗೆ ಹಿನ್ನಡೆಯಾಗಲಿದೆ ಎಂದು ಮುಸ್ಲಿಂ ಚಿಂತಕರ ಚಾವಡಿಯ ಮುಖಂಡ ಸೈಯದ್ ಖಾಲೀದ ಕೊಪ್ಪಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅನುದಾನ ಕಡಿತಗೊಳಿಸಿರುವದನ್ನು ಖಂಡಿಸಿ ಗದಗ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾ ಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ ೨೦೧೯-೨೦ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ಇರುವದು ವಿದ್ಯಾರ್ಥಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ.

ರಾಜ್ಯದಲ್ಲಿ ೨೦೧೬-೧೭ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ (ಪಿ.ಎಚ್.ಡಿ./ಎಂ.ಫೀಲ್) ಕೈಗೊಳ್ಳಲು ಪ್ರತಿ ತಿಂಗಳು ನೀಡಲಾಗುತ್ತಿದ್ದ ಪ್ರೋತ್ಸಾಹಧನ ೨೫೦೦೦.ರೂಗಳನ್ನು ೮೩೩೩.ರೂಗಳಿಗೆ ಕಡಿತಗೊಳಿಸಿ ಬಡ ವರ್ಗದ ಮಕ್ಕಳ ಶೈಕ್ಷಣಿಕ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ರಾಜ್ಯ ಬಿಜೆಪಿ ಸರಕಾರ ನಡೆಸಿದೆ ಎಂದು ಸೈಯದ್ ಆರೋಪಿಸಿದರು.

ಮುಸ್ಲಿಂ ಚಿಂತಕರ ಚಾವಡಿಯ ಜಿಲ್ಲಾ ಮುಖಂಡ ಆರ್.ಕೆ. ಬಾಗವಾನ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಕೈ ಬಿಡಲಾಗಿದ್ದು ೨೦೧೯-೨೦ನೇ ಸಾಲಿನಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ೧೮೯೭.೦೦ಕೋ.ರೂ.ಗಳಿಂದ ಇದೀಗ ಮತ್ತೆ ೧೦೦೫. ಕೋಟಿ. ಅನುದಾನ ಕಡಿತಗೊಳಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ ೫ ವ?ಗಳಿಂದ ಜಾರಿಯಲ್ಲಿಟ್ಟಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳ ಅನುದಾನ ಕಡಿತಗೊಳಿಸಿರುವುದರಿಂದ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ದಿಗೆ ಹಿನ್ನಡಯಾಗಲಿದೆ. ಕೂಡಲೇ ಸರ್ಕಾರ ಇಲಾಖೆಗೆ ನೀಡುತ್ತಿದ್ದ ಅನುದಾನವನ್ನು ಯಥಾವತ್ತಾಗಿ ಮುಂದುವರೆಸಬೇಕೆಂದು ಒತ್ತಾಯಿಸಿದರು.

ಶೈಕ್ಷಣಿಕ ಸಾಲದ ಯೋಜನೆ ಸಹ ಈ ವ? ದಾರಿ ತಪ್ಪಿದೆ, ಈ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವ? ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ದ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಶೈಕ್ಷಣಿಕ ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂದಿಸಿದ ಯಾವುದೇ ಹೊಸ ಯೋಜನೆ ಜಾರಿಗೊಳಿಸದೇ ಇದ್ದರೂ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರೆಸಬೇಕು, ಸದರಿ ಯೋಜನೆಗಳನ್ನು ಮುಂದುವರೆಸಲು ಬೇಕಾಗುವ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಹ್ಮದ ಶಫಿ ನಾಗರಕಟ್ಟಿ, ಭಾಷಾಸಾಬ ಮಲಸಮುದ್ರ, ಎಂ.ಎ.ಕುರಹಟ್ಟಿ, ಶೌಕತ್ ಕಾತರಕಿ, ಅಕ್ಬರ ಅಲಿಬೇಗ, ದಾವುದ್ ಜಾಮಾಲ್, ಮುನ್ನಾ ಡಾಲಾಯತ್, ಖಾಸಿಂ ಧಾರವಾಡ, ತನ್ವೀರ ಹಾಜಿ., ಮೈನುದ್ದೀನ್ ನದಾಫ್, ದಾದು ಮುಂಡರಗಿ, ಎಂ.ಡಿ.ಇಸ್ಮಾಯಿಲ್, ಜಾಫರ ಡಾಲಾಯತ್ ಭಾಗವಹಿಸಿದ್ದರು.

ಅನುದಾನ ಕಡಿತಗೊಳಿಸಲು ಕೋವಿಡ್-೧೯ ಕಾರಣವಿದ್ದರೂ ಯಾವುದೇ ಸರಕಾರ ಜನಪರ ಕಲ್ಯಾಣ ಇಲಾಖೆಗಳ ಯೋಜನೆಗಳನ್ನು ಕಡಿತಗೊಳಿಸುವದು ಸಾಮಾಜಿಕ ಬದ್ದತೆಯ ದೃಷ್ಟಿಯಿಂದ ಒಳ್ಳೆಯ ಆಡಳಿತದ ಮಾದರಿಯಾಗಲಾರದು. ಸರಕಾರದಲ್ಲಿ ಯಾವುದೇ ಇಲಾಖೆಗೂ ಇರದ ಅನುದಾನ ಕಡಿತ ಕೇವಲ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮಾತ್ರ ಏಕೆ ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ.


-ದಾವಲಸಾಬ ತಾಳಿಕೋಟಿ

Spread the love

LEAVE A REPLY

Please enter your comment!
Please enter your name here