25.8 C
Gadag
Saturday, June 10, 2023

ಅಸಮಾಧಾನ ಏನೇ ಇದ್ದರೂ ಪಕ್ಷದ ಒಳಗೇ ಮಾತನಾಡಿ: ಯತ್ನಾಳ್ ಗೆ ಸಿಎಂ ಪರೋಕ್ಷ ಎಚ್ಚರಿಕೆ

Spread the love

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಪದೇ ಪದೇ ಪಕ್ಷಕ್ಕೆ ಮುಜುಗರವಾಗುವ ರೀತಿಯ ಹೇಳಿಕೆ ನೀಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಿಎಂ ಬಿಎಸ್ವೈ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಿಎಸ್ವೈ, ಹತ್ತರಿಂದ ಹನ್ನೆರಡು ಜನ ಮಂತ್ರಿ ಮಾಡಲಿಲ್ಲ ಎಂದು ಬೇಸರವಾಗಿದ್ದಾರೆ.
ನನ್ನ ಇತಿಮಿತಿಯಲ್ಲಿ ನಾನು ಮಾಡಿದ್ದೇನೆ. ಕೇಂದ್ರದ ನಾಯಕರ ಆಶೀರ್ವಾದವೂ ಇದಕ್ಕಿದೆ. ಇನ್ನು ಮುಂದೆ ರಾಜ್ಯದ ಅಭಿವೃದ್ಧಿಗೆ ಗಮನ ಹರಿಸುವೆ, ಮಂತ್ರಿ ಸ್ಥಾನ ಸಿಗದ ಹಿನ್ನೆಲೆ ಇಲ್ಲ ಸಲ್ಲದ ಹೇಳಿಕೆ ನೀಡುವುದನ್ನು ಬಿಟ್ಟು ನನ್ನ ಜೊತೆ ಚರ್ಚೆ ಮಾಡಲಿ. ಸಚಿವ ಸ್ಥಾನ ವಂಚಿತರು ಹೇಳಿಕೆ ನೀಡಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ. ಇದು ಬೇಡ ಎಂದು ಯತ್ನಾಳ್ ಅವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಮಾರ್ಚ್ ನಲ್ಲಿ ಬಜೆಟ್ ಇದೆ. ಬಜೆಟ್ ರೈತರ ಪರವಾಗಿರಲಿದೆ. ನಮಗೆ ಕೇಂದ್ರದ ನಾಯಕರ ಆಶೀರ್ವಾದ ಇದೆ ಎಂದ ಅವರು, ಸಿಡಿ ವಿಚಾರವಾಗಿ ಮಾತನಾಡಿ, ಯಾರಿಗೂ ಹೆದರುವ ಅಗತ್ಯವಿಲ್ಲ ಎಂದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts