ಅಹಿಂದ ವರ್ಗಗಳನ್ನೇ ಮರೆತ ಸಿದ್ದರಾಮಯ್ಯಗೆ ತಕ್ಕ ಉತ್ತರ; ನಳೀನ್

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಸಿದ್ದರಾಮಯ್ಯ ಶಕ್ತಿ ತುಂಬಿದ ಸಮುದಾಯಗಳನ್ನೇ ಮರೆತಿದ್ದು, ಅಧಿಕಾರಕ್ಕಾಗಷ್ಟೇ ಅಹಿಂದ ಬೇಕಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು,
ಅಹಿಂದ ಚಳುವಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು. ಎಲ್ಲ ವರ್ಗದವರು ಬೆಂಬಲಿಸಿದರು.
ಸಿಎಂ ಬಳಿಕ ಸಿದ್ದರಾಮಯ್ಯ ಅಹಿಂದ ವರ್ಗವನ್ನೇ ಮರೆತರು ಎಂದು ವ್ಯಂಗ್ಯವಾಡಿದರು.

ಅಧಿಕಾರದಲ್ಲಿರುವಾಗ ನಮ್ಮ ಪರ ನಿಂತ ಸಮುದಾಯಗಳ ಪರ ಕೆಲಸ ಮಾಡಬೇಕು.
ಆದರೆ, ಸಿದ್ದರಾಮಯ್ಯ ಅಹಿಂದ ಸಮುದಾಯಗಳನ್ನ ಮರೆತ ಕಾರಣಕ್ಕೆ ತಕ್ಕ ಉತ್ತರವೂ ಸಿಕ್ಕಿತು ಎಂದರು.

ಬಿಜೆಪಿ ಪ್ರತಿ ವರ್ಗಗಳಿಗೂ ಮೋರ್ಚಾಗಳನ್ನ ನೇಮಕಗೊಳಿಸಿ ತಳಮಟ್ಟದಲ್ಲಿ ಪಕ್ಷ ಸಂಘಟಿಸುತ್ತಿದೆ.
ಕಾರ್ಯಕರ್ತರ ಮೂಲಕ ಬಿಜೆಪಿ ಆಯಾ ಸಮುದಾಯಗಳ ಸಮಸ್ಯೆ ಪರಿಹರಿಸಲು ಮುಂದಾಗಿದೆ. ಒಂದು ಕಾಲದಲ್ಲಿ ಬಿಜೆಪಿ ಪಕ್ಷ ಕೇವಲ ಮೇಲ್ವರ್ಗದ ಪಕ್ಷ ಎಂಬಂತಿತ್ತು. ಆದರೆ, ಇವತ್ತು ಎಲ್ಲ ವರ್ಗದವರು ಪಕ್ಷದ ಮುಂಚೂಣಿಯ ಕುರ್ಚಿಯಲ್ಲಿದ್ದಾರೆ. ಬಿಜೆಪಿ ಎಲ್ಲ ವರ್ಗದ ಸ್ಪರ್ಶ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೆಮ್ಮೆ ಪಟ್ಟರು.

ಒಂದು ಕಾಲದಲ್ಲಿ ಒಂದು ಲೈಟು ಕಂಬ ನಿಲ್ಲಿಸಿದರು. ಕಾಂಗ್ರೆಸ್ ಗೆಲ್ಲುತ್ತಿತ್ತು, ಆದರೆ, ಇಂದು ಸಮುದಾಯ, ಸಮಾಜ ಕಡೆಗಣಿಸಿದ್ದಕ್ಕಾಗಿ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಹಿಂದುಳಿದ ವರ್ಗಗಳ ಶಾಸಕರು ಬಿಜೆಪಿ ಪಕ್ಷದಲ್ಲಿದ್ದಾರೆ. ಇದು ಬಿಜೆಪಿಯ ಶಕ್ತಿ. ಹಾಗಾಗಿ ಜನರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here