ಆಮೆಗತಿಯಲ್ಲಿ ಯುಜಿಡಿ ಕಾಮಗಾರಿ : ಗುಂಡಿಯಲ್ಲಿ ಬಿದ್ದು ಹಸುವಿನ ನರಳಾಟ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ನಗರದ ಪಂಡಿತ ಪುಟ್ಟರಾಜ ವೃತ್ತದ ಪಾಲಾ-ಬದಾಮಿ ರಸ್ತೆಯಲ್ಲಿ ಯುಜಿಡಿ ಯೋಜನೆಯಡಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ಚರಂಡಿ ಗುಂಡಿಯಲ್ಲಿ ಹಸು ಬಿದ್ದು ನರಳಾಡಿದ ಘಟನೆ ಬೆಳಗಿನ ಜಾವ ನಡೆದಿದೆ.

ಬೆಳ್ಳಂಬೆಳಗ್ಗೆ ಆಯಾತಪ್ಪಿ ಸುಮಾರು 5 ಅಡಿ ಆಳದ ಗುಂಡಿಯೊಳಗೆ ಬಿದ್ದು ಅತ್ತಿತ್ತ ಹೊರಳಾಡಲು ಜಾಲವಿಲ್ಲದೇ ಮೇಲೆದ್ದೇಳಲು ಆಗದೆ ಒದ್ದಾಡಿದೆ.

ಸುಮಾರು 2 ಗಂಟೆಗಳ ಕಾಲ ಆಕಳು ಗುಂಡಿಯಲ್ಲಿ ಬಿದ್ದು ನರಳಾಡಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ಹಿಟಾಚಿ ಮೂಲಕ ಹಸುವನ್ನು ಮೇಲಕ್ಕೆತ್ತಿದ್ದಾರೆ.

ಯುಜಿಡಿ ಕಾಮಗಾರಿ ಸುಮಾರು 4 ವರ್ಷಗಳಿಂದ ಆಮೆವೇಗದಲ್ಲಿ ಸಾಗುತ್ತಿರುವುದರಿಂದ ನಗರದ ಜನರು ಹೈರಾಣಾಗಿದ್ದಾರೆ. ಅಲ್ಲದೇ, ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿರುವುದರಿಂದ ವಾಹನ ಸವಾರರು ಪರದಾಡುತ್ತಿದ್ದು, ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here