ಆರೋಗ್ಯ ತಪಾಸಣಾ ಶಿಬಿರ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ವಿಶ್ವ ಹೃದಯ ದಿನದ ಅಂಗವಾಗಿ ಭಾರತ ಸರ್ಕಾರ ಅಕ್ಟೋಬರ್ 2 ರಿಂದ 23 ರವರೆಗೆ ಸದೃಢ ಆರೋಗ್ಯ ಕಾರ್ಯಕರ್ತರ ಅಭಿಯಾನ ಹಮ್ಮಿಕೊಳ್ಳಲು ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಎಲ್ಲಾ ಜಿಲ್ಲಾ ಮಟ್ಟದ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಅಸಾಂಕ್ರಾಮಿಕ ಕಾಯಿಲೆಗಳಾದ ರಕ್ತದೊತ್ತಡ, ಮಧುಮೇಹ ಹಾಗೂ ಸಾಮಾನ್ಯ ಕ್ಯಾನ್ಸರ್ (ಬಾಯಿ, ಸ್ತನ ಮತ್ತು ಗರ್ಭಾಶಯ ಕಂಠದ ಕ್ಯಾನ್ಸರ್) ತಪಾಸಣೆಯನ್ನು ಅಕ್ಟೋಬರ್ 12 ರಿಂದ 14 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 101 ರಲ್ಲಿ ಹಮ್ಮಿಕೊಳ್ಳಲಾಗಿದೆ.
ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 


Spread the love

LEAVE A REPLY

Please enter your comment!
Please enter your name here