ಇಂಜನೀಯರ್ ಜೊತೆ ಅನೈತಿಕ ಸಂಬಂಧ ಆರೋಪ: ಮಹಿಳೆಯರ ಮಧ್ಯೆ ಮಾರಾಮಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಪರನಾರಿ ಜೊತೆ ನನ್ನ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಸಣ್ಣನೀರಾವರಿ ಇಲಾಖೆಯ ಅಧಿಕಾರಿಯ ಪತ್ನಿ ರಂಪಾಟ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ನಗರದ ಕುಷ್ಟಗಿ ಸರ್ಕಲ್ ಬಳಿಯ ಸಣ್ಣನೀರಾವರಿ ಇಲಾಖೆಯ ಅಧಿಕಾರಿ ವಿನೋದ್ ಕುಮಾರ್ ಗುಪ್ತಾ ಪರ ಸ್ತ್ರೀಯೊಂದಿಗೆ ಮನೆಯಲ್ಲಿದ್ದಾಗ ಗುಪ್ತಾಳ ಪತ್ನಿ ಹಾಗೂ ಮಕ್ಕಳು ದಾಳಿ ಮಾಡಿದ್ದಾರೆ. ಇದೇ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ವಿನೋದ್ ಕುಮಾರ್ ಗುಪ್ತಾ ಹಾಗೂ ಪರನಾರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಗುಪ್ತಾಳ ಪತ್ನಿ ಹಾಗೂ ಅನೈತಿಕ ಸಂಬಂಧ ಹೊಂದಿದ ಮಹಿಳೆ ಮನೆಯೊಳಗೆ ಕೈ ಕೈ ಮಿಲಾಯಿಸಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ವಿಷಯ ತಿಳಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ಇದೀಗ ಕೊಪ್ಪಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.


Spread the love

LEAVE A REPLY

Please enter your comment!
Please enter your name here