ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಇಡೀ ಭಾರತದಿಂದ ಕೊರೋನಾ ಮುಕ್ತಿ ಪಡೆದು ಎಲ್ಲರೂ ಕ್ಷೇಮ ಹಾಗೂ ಆರೋಗ್ಯವಾಗಿರಲಿ ಎಂದು ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಅವರು ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಶುಭಕೋರಿದ ಅವರು, ತಂದೆ ತಾಯಿ ರಾಯರ ಕೃಪೆಯಿಂದ ಈ ಸಂವತ್ಸರ ಸಮಸ್ತ ಮನುಕುಲದಮನೋವಾಂಛ ಫಲಗಳನ್ನು ಈಡೇರಿಸಿ ನಮ್ಮನ್ನು ಕಾಡುತ್ತಿರುವ ಕೊರೋನಾ ಭಾರತದಿಂದ ತೊಲಗಿ, ಹೊಸ ಕಾಲದ ಆದಿಯೇ,
ಲೋಕದ ಜನರ ಕಷ್ಟಗಳ ನೀಗುತ್ತಾ ಬಾ…
ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ…
ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ ಬಾ.
ಈ ಹೊಸತನ, ನಿರೀಕ್ಷೆ, ಭರವಸೆಗಳನ್ನು ಹೊತ್ತು ಕಳೆದ ವರ್ಷದ ತೊಡಕುಗಳು ಈ ಹೊಸ ವರ್ಷ ನೀಗಲಿ. ಬೇವು-ಬೆಲ್ಲದ ಅನುಭವಗಳು ಈ ವರ್ಷ ಸಮನಾಗಿರಲಿ ಎಂದರು.
ಈ ಶುಭ ವರ್ಷ ಎಲ್ಲರಿಗೂ ಒಳಿತು ತರಲೆಂದು ಭಗವಂತನಲ್ಲಿ ನಾನು ಕೋರುತ್ತೇನೆ ಎಂದು ನಾಡಿನ ಸಮಸ್ತರಿಗೂ ಯುಗಾದಿ-ಹೊಸ ವರ್ಷದ ಶುಭಾಶಯಗಳನ್ನು ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ತಿಳಿಸಿದ್ದಾರೆ