25.8 C
Gadag
Saturday, June 10, 2023

ಉಪ ಸಭಾಪತಿ ಧರ್ಮೇಗೌಡ ನಿಧನಕ್ಕೆ ಮಹಾಮಂಡಳ ಸಂತಾಪ

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಧರ್ಮೇಗೌಡರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ. ಶ್ರೀಯುತರ ಅಗಲಿಕೆಯಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ, ಹಿರಿಯ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ.

ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ಸಂತಾಪ ಸಂದೇಶದ ಮೂಲಕ ಪ್ರಾರ್ಥಿಸಿದ್ದಾರೆ.

ಸಜ್ಜನ ವ್ಯಕ್ತಿತ್ವ ಹೊಂದಿದ್ದ ಅವರ ಹಠಾತ್‌ ಮರಣದ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts