22.8 C
Gadag
Saturday, December 9, 2023

ಎಐಟಿಯುಸಿ ಕಾರ್ಮಿಕ ಸಂಘಟನೆಯಿಂದ ಶೇಖರಗೌಡರಿಗೆ ಬೆಂಬಲ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು

ಏಪ್ರಿಲ್ 2021ರಲ್ಲಿ ನಡೆಯಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲರನ್ನು ಬೆಂಬಲಿಸಿದೆ ಎಂದು ಎಐಟಿಯುಸಿ ಹಾಗೂ ರಾಜ್ಯ ಕೆ ಎಸ್ ಆರ್ ಟಿ ಸಿ ಸ್ಟ್ಯಾಪ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ ಸುಬ್ಬರಾವ್ ಘೋಷಿಸಿದ್ದಾರೆ.
ಬೆಂಗಳೂರಿನ ಕೇಂದ್ರ ಕಚೇಯಲ್ಲಿ ಕೆ ಎಸ್ ಆರ್ ಟಿ ಸಿ, ಬಿ ಎಂ ಟಿ ಸಿ ನೌಕರರ ಸಭೆಯಲ್ಲಿ ಶೇಖರಗೌಡ ಅವರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಅನೇಕ ಕಾರಣಗಳಿಂದ ಅನ್ಯಾಯಕ್ಕೆ ಒಳಗಾಗಿದೆ. ಅವರಿಗೆ ರಾಜಕೀಯ ಹಾಗೂ ಸಾಂಸ್ಕೃತಿಕವಾಗಿ ಸಿಕ್ಕಬೇಕಾದ ಸ್ಥಾನಮಾನ ಸಿಕ್ಕಿಲ್ಲ.

105 ವರ್ಷವಾದರೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಲ್ಲಿನವರು ಒಬ್ಬರೂ ಅಧ್ಯಕ್ಷರಾಗಿಲ್ಲ. ಈ ಸಾರಿ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಅನುಭವಿ, ಪ್ರಾಮಾಣಿಕ ಸಜ್ಜನ ಶೇಖರಗೌಡ ಮಾಲಿಪಾಟೀಲರು ಸ್ಪರ್ಧಿಸುತ್ತಿದ್ದು ಅವರನ್ನು ಗೆಲ್ಲಿಸಬೇಕು. ಸಾಹಿತ್ಯ ಪರಿಷತ್ತು ಕನ್ನಡಿಗರ ಆಶಯಗಳನ್ನು ಈಡೇರಿಸುವ ಸಂಸ್ಥೆಯಾಗಿ ಎತ್ತರಕ್ಕೆ ಬೆಳೆಯಬೇಕು ಎಂದು ಆಶಯ‌ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಕೆ ಎಸ್ ಆರ್ ಟಿ ಸಿ ನೌಕರರ ಸಹಕಾರ ಸಂಘದ ಅಧ್ಯಕ್ಷ ವೆಂಕಟೇಶ್, ಬೆಂಗಳೂರು ನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ. ತಿಮ್ಮೇಶ್, ಸಾಹಿತಿ ಆರ್ ಜಿ‌ ಹಳ್ಳಿ ನಾಗರಾಜ, ದ್ವಾರನಕುಂಟೆ ಪಾತಣ್ಣ, ಉಪನ್ಯಾಸಕರಾದ ಡಾ. ಕಾಂತರಾಜಪುರ ಸುರೇಶ, ಡಾ. ವಸಂತಕುಮಾರ ಉಪಸ್ಥಿತರಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts