ಎಮ್ಮೆಗಳ ಕಳ್ಳಸಾಗಣೆ: ಮೂವರ ಬಂಧನ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರೊಬ್ಬರಿಗೆ ಸೇರಿದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಎಮ್ಮೆಗಳನ್ನು ಕದ್ದು ಸಾಗಿಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಗಂಗಾವತಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಾನುವಾರು ವ್ಯಾಪಾರಿ ಅಮರ ಭಗತ್‌ಸಿಂಗ್ ನಗರದ ಹುಸೇನಸಾಬ ಖಲಂದರ್, ಜಂಗರಮರ ಕಲ್ಗುಡಿ ಗ್ರಾಮದ ಖಾಸಗಿ ವಾಹನಗಳ ಚಾಲಕ ರಿಜ್ವಾನ್ ಭಾಷಾಸಾಬ್, ಕೂಲಿ ಕಾರ್ಮಿಕ ದಾವೂದ್ ಲಾಲ್‌ಸಾಬ್ ಬಂಧಿತ ಆರೋಪಿಗಳು.

ಜಾನುವಾರುಗಳ ಮಾಲೀಕ ನೀಡಿದ ದೂರಿನ ಹಿನ್ನೆಲೆ, ಸುಳಿವೊಂದನ್ನು ಹಿಡಿದು ಬೆನ್ನು ಹತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಆರೋಪಿಗಳು ಆ. 31ರ ಮಧ್ಯರಾತ್ರಿ ಜಾನುವಾರುಗಳನ್ನು ಕಳ್ಳತನ ಮಾಡಿ ಬಳ್ಳಾರಿಗೆ ಸಾಗಿಸಿದ್ದಾರೆ. ಅಲ್ಲಿ ವಧಾ ಗೃಹಕ್ಕೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here