ಎಸಿಬಿ ಬಲೆಗೆ ತೋಟಗಾರಿಕಾ ಸಹಾಯಕ ನಿರ್ದೇಶಕ

0
Spread the love

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜೂರಾತಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಗುಂಡ್ಲುಪೇಟೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿಯಾಗಿದ್ದಾರೆ.

ಎಸಿಬಿ ಅಧಿಕಾರಿಗಳಿಂದ ಕಡತ ಪರಿಶೀಲನೆ

ಹನಿ‌ನೀರಾವರಿ ಯೋಜನೆಯ ಸಲಕರಣೆಗಳ ವಿತರಕ ಕಡಬೂರು ಮಂಜು ರವರ ಬಳಿ 50 ಸಾವಿರ ರೂಪಾಯಿ ಬೇಡಿಕೆಯಿಟ್ಟಿದ್ದ ಶಿವಲಿಂಗಪ್ಪರವರಿಂದ ಬೇಸತ್ತ ಕಡಬೂರು ಮಂಜು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಎಸಿಬಿಗೆ ಬಂದ ದೂರಿನನ್ವಯ ಡಿವೈಎಸ್ಪಿ ಸದಾನಂದ, ಇನ್ಸ್ ಪೆಕ್ಟರ್ ದೀಪಕ್, ಕಿರಣ್, ಸಿಬ್ಬಂದಿಗಳಾದ ಸತೀಶ್, ಮಹದೇವಸ್ವಾಮಿ, ಕಾರ್ತಿಕ್, ನಾಗೇಂದ್ರ ರವರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದರೆ.

ಗುಂಡ್ಲುಪೇಟೆ ತಾಲೂಕಿನ ರೈತರಿಗೆ ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಮಂಜೂರು ಮಾಡಲು ಪ್ರತಿ ಘಟಕಕ್ಕೆ ಇಂತಿಷ್ಟು ಎಂದು ಲಂಚದ ಹಣ ನಿಗದಿಪಡಿಸಿದ್ದ ಶಿವಲಿಂಗಪ್ಪ ಎಸಿಬಿ ದಾಳಿಗೆ ಬೆಚ್ಚಿ ಬಿದಿದ್ದಾರೆ.


Spread the love

LEAVE A REPLY

Please enter your comment!
Please enter your name here