ಎಸ್.ಟಿ. ಮೀಸಲಾತಿ ಹೋರಾಟಕ್ಕೆ ತಾತ್ಕಾಲಿಕ ವಿರಾಮ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲು ನೀಡಲು ಮೀನಾಮೇಶ ಎಣಿಸುತ್ತಿರುವ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಶೀಘ್ರ ಮೀಸಲು ಘೋಷಣೆಗೆ ಒತ್ತಾಯಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ ಸರಕಾರದ ಭರವಸೆ ಮೇರೆಗೆ ಮೂರನೇ ದಿನಕ್ಕೆ ಮೊಟಕುಗೊಳಿಸಲಾಗಿದೆ.
ನಗರದ ಜಿಲ್ಲಾಡಳಿತ ಭವನದ ಎದುರು ಹಾಗೂ ವಿವಿಧ ತಾಲೂಕ ಕೇಂದ್ರಗಳಲ್ಲಿ ಕೊಪ್ಪಳ ಜಿಲ್ಲಾ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹತ್ತು ದಿನಗಳ ಪ್ರತಿಭಟನಾ ಧರಣಿಯ ಮೂರನೆ ದಿನ ಜಿಲ್ಲಾ ಮುಖಂಡರ ಜೊತೆ ತಿಗರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಖಂಡರು ಭಾಗವಹಿಸಿದ್ದರು.
ಸಮಾಜಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 7.5 ಮೀಸಲು ಕೊಡುವುದು ಸಂವಿಧಾನ ಬದ್ಧವಾಗಿದೆ. ಆದರೆ ಮಾತು ತಪ್ಪಿದ ಯಡಿಯೂರಪ್ಪ ಸರಕಾರಕ್ಕೆ ಆಸಕ್ತಿ ಇಲ್ಲದ ಕಾರಣ ಹೋರಾಟ ತೀವ್ರವಾಗಿತ್ತು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಕುಳಿತಿದ್ದ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಯವರ ಜೊತೆಗೆ ಸರಕಾರದ ವಿವಿಧ ಸಚಿವರು ಸಿಎಂ ಅವರ ಪರವಾಗಿ ಮಾತನಾಡಿದ ಕಾರಣ, ಧರಣಿ ಕೈಬಿಡಲಾಗಿದೆ. ಸರಕಾರ 40 ದಿನಗಳ ಕೊನೆಯ ಅವಕಾಶವನ್ನು ತೆಗೆದುಕೊಂಡಿದ್ದು ಅದನ್ನು ತಪ್ಪಿದಲ್ಲಿ ಮುಂದಿನ ಉಗ್ರ ಹೋರಾಟದ ರೂಪ ಕೊಡಲಾಗುವುದು ಎಂದು ಮಠದ ಹೇಳಿಕೆಯನ್ನು ಆಧರಿಸಿ ಹೋರಾಟ ಕೈಬಿಡಲಾಗಿದೆ.
ಹೋರಾಟದಲ್ಲಿ ರಾಜ್ಯ ಕಾರ್ಯದರ್ಶಿ ಸುರೇಶ ಡೊಣ್ಣಿ, ಕೊಪ್ಪಳ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ, ತಾಲೂಕ ಅಧ್ಯಕ್ಷ ಶರಣಪ್ಪ ನಾಯಕ್, ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾರ್ಯದರ್ಶಿ ಶಿವಮೂರ್ತಿ ಗುತ್ತೂರ್, ಮಾರ್ಕಂಡಪ್ಪ ಕಲ್ಲನವರ, ಗೋವಿಂದಪ್ಪ ಬಂಡಿ, ಪಟ್ಟಣ ಪಂಚಾಯತಿ ಸದಸ್ಯ ರುಕ್ಮಣ್ಣ ಶಾವಿ, ಹನುಮಂತಪ್ಪ ಗುದಗಿ, ಮುದಿಯಪ್ಪ ಅಡವಳ್ಳಿ ತಿಗರಿ, ವೀರಪ್ಪ ವಾಸ್ತೆನೂರ ಕವಲೂರ, ಬಸವರಾಜ ಶಹಪೂರ, ವಿರುಪಾಕ್ಷಗೌಡ್ರು ಗಂಗನಾಳ, ಬೀಮನಗೌಡ ಪೋ.ಪಾ., ವಿ. ಬಿ. ಬದೂರ, ವೆಂಕಟೇಶ ಹಲವಾಗಲಿ, ಪ್ರಶಾಂತ ಕರಡಿ, ಉಮೇಶಗೌಡ ಪಾಟೀಲ್, ಭರಮಜ್ಜ ಬ್ಯಾನಿ ಹನುಕುಂಟಿ, ಮಲ್ಲಿಕಾರ್ಜುನ ಕಲ್ಲನವರ, ಹನುಮಂತಪ್ಪ, ಯಲ್ಲಪ್ಪ ಕರಡಿ ಇತರರು ಇದ್ದರು.


Spread the love

LEAVE A REPLY

Please enter your comment!
Please enter your name here