ಒಂದೊಂದಾಗಿ ಸಾಯುತ್ತಿರುವ ಕುರಿಗಳು: ಚಿಕಿತ್ಸೆ ನೀಡಲು ಸತಾಯಿಸುತ್ತಿರುವ ವೈದ್ಯರು!

0
Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಶನಿವಾರ ಬೆಳಗಿನಿಂದ ಅಸ್ವಸ್ಥಗೊಂಡಂತೆ ಕಂಡು ಬಂದ ಕುರಿಯೊಂದು ತಾಲೂಕಿನ ಅಳವಂಡಿ ಹೋಬಳಿಯ ಹೈದರ್‌ನಗರದಲ್ಲಿ ನಡೆದಿದೆ.
ತಕ್ಷಣ ಕುರಿಗಾಹಿ ದೇವಪ್ಪ ಅವರು ಪಶು ವೈದ್ಯ ವಿನೋದ ಅಳವಂಡಿ ಅವರಿಗೆ ಕರೆ ಮಾಡಿ ವಿಷಯ ತಿಳಿಸಿ ಸುಮಾರು ನಾಲ್ಕು ಗಂಟೆ ಕಳೆದರೂ ಸ್ಥಳಕ್ಕೆ ಪಶುವೈದ್ಯರು ಬಂದಿಲ್ಲ. ಪರಿಣಾಮ ಕುರಿಹಿಂಡಿನಲ್ಲಿರುವ ಒಂದೊಂದೇ ಕುರಿಗಳು ಅಸು ನೀಗುತ್ತಿವೆ.
ಇದರಿಂದ ಆತಂಕಗೊಂಡಿರುವ ಕುರಿಗಾಹಿ ದೇವಪ್ಪ ಪರಿ ಪರಿಯಾಗಿ ಬೇಡಿಕೊಂಡರೂ ವೈದ್ಯರು ನಮಗೆ ಇದೊಂದೇ ಕೆಲಸ ಅಲ್ಲ, ಬೇರೆ‌ ಕಡೆ ಇದೀವಿ. ಜೊತೆಗೆ ಇವತ್ತು ರಜೆ ಬೇರೆ ಇದೆ. ಬರುವವರೆಗೆ ಕಾಯಬೇಕು ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎಂದು ಕುರಿಗಾಹಿ ದೇವಪ್ಪ ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ಕೇಳಲು ಪಶುವೈದ್ಯ ವಿನೋದ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೆ ಸಂಪರ್ಕ ಸಾಧ್ಯವಾಗುತ್ತಿಲ್ಲ‌.


Spread the love

LEAVE A REPLY

Please enter your comment!
Please enter your name here