22.8 C
Gadag
Saturday, December 9, 2023

ಕಳ್ಳತನದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಕಳ್ಳತನದ ಪ್ರಕರಣವೊಂದರ ವಿಚಾರಣೆಗೆ ಕರೆ ತಂದಿದ್ದ ಆರೋಪಿಯೊಬ್ಬ ಪೊಲೀಸರಿಬ್ಬರಿಗೆ ಚೆಳ್ಳೆಹಣ್ಣು ತಿನಿಸಿ ಠಾಣೆಯಿಂದಲೇ ಪರಾರಿಯಾದ ಘಟನೆ ಜಿಲ್ಲೆಯ ರೋಣದಲ್ಲಿ ನಡೆದಿದೆ.

ರೋಣ ತಾಲ್ಲೂಕಿನ
ಶಾಂತಗೇರಿ ಗ್ರಾಮದ ರಾಜೇಸಾಬ ಅಬ್ದುಲ್ ಸಾಬ ರಾಜೇಖಾನ್ ಎಂಬ ಆರೋಪಿಯೇ ರೋಣ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡಾತ.

ಈತ ಈ ಹಿಂದೆ ಕಳ್ಳತನದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಾಗ ಈ ಘಟನೆ ನಡೆದಿದೆ.

ಆರೋಪಿ ರಾಜೇಸಾಬ್ ಮೂತ್ರ ವಿಸರ್ಜನೆಯ ನೆಪ ಮಾಡಿ ಠಾಣೆಯಿಂದ ಹೊರಬಂದಾಗ ಕಾವಲಿಗಿದ್ದ ಇಬ್ಬರು ಪೊಲೀಸರನ್ನು ನೂಕಿ ಪರಾರಿಯಾಗಿದ್ದಾನೆ.

ಈ ಕುರಿತು ರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ವಿನೋದ ಪೂಜಾರಿ ಪರಾರಿಯಾಗಿರುವ ಆರೋಪಿ ರಾಜೇಸಾಬ್ ನ ಪತ್ತೆಗಾಗಿ ಜಾಲ ಬೀಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts