ಕಸದ ತೊಟ್ಟಿಯಾದ ವಾರ್ಡ್; ಕಣ್ಮುಚ್ಚಿ ಕುಳಿತ ಗ್ರಾಪಂ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕು ಮಂಗಳೂರು ಗ್ರಾಮದ 1 ನೇ ವಾರ್ಡ‌ನಲ್ಲಿರುವ ಬಿ ರಾಚಯ್ಯ ನಗರ ಅಕ್ಷರಶಃ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.

ವಾರ್ಡ್‌ನಲ್ಲಿ ಕಸದ ರಾಶಿ ಬಿದ್ದರೂ ಗ್ರಾಪಂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಬೀದಿ ದೀಪದ ಕಂಬಗಳಲ್ಲಿ ಬಲ್ಬ್‌ಗಳು ಬೆಳಕು ನೀಡದೇ, ಕತ್ತಲು ಆವರಿಸಿದೆ. ನೀರಿನ ಸೌಕರ್ಯವಿಲ್ಲ . ಚರಂಡಿಯ ಕಸವನ್ನು ತೆಗೆದರೂ ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡದೇ ತೆಗೆದ ಸ್ಥಳದಲ್ಲೇ ಹಾಕುತ್ತಾರೆ.

ಇದರಿಂದಾಗಿ ರೋಗ ರುಜಿನಗಳು ಉಂಟಾಗುವ ಭಯ ಸುತ್ತಮುತ್ತಲಿನ ನಾಗರಿಕರಲ್ಲಿದೆ. ಸಂಬಂಧಪಟ್ಟ ಅಧಿಕಾರಿಗಳು ಮೂಲಭೂತ ಸೌಕರ್ಯಗಳನ್ನು ಜನರಿಗೆ ಒದಗಿಸಿಕೊಡಬೇಕು.

ಜನರು ಅನೇಕ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಿದರೂ ಇದುವರೆಗೂ ಒಂದು ಸಮಸ್ಯೆಯನ್ನು ಕೂಡ ಬಗೆಹರಿಸಿಲ್ಲ‌. ಇನ್ನು ಮುಂದೆ ಉದಾಸೀನ ಧೋರಣೆ ತಾಳಿದರೆ ಗ್ರಾಪಂ‌ಗೆ ಬೀಗ ಹಾಕುವುದು ಅನಿವಾರ್ಯವಾಗುತ್ತದೆ ಎಂದು ನಿವಾಸಿಗಳು ಎಚ್ಚರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here