25.7 C
Gadag
Wednesday, June 7, 2023

ಕಾಂಗ್ರೆಸ್‌ನದ್ದು ರೈತ ವಿರೋಧಿ ಕೆಲಸ: ಕೇಂದ್ರ ಸಚಿವ ಸದಾನಂದಗೌಡ

Spread the love

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

ದೇಶದಲ್ಲಿ ರೈತರ ಪರವಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದರೂ, ವಿರೋಧಿಗಳು ರೈತರನ್ನು ಉಯಿಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರೈತರ ಮುಖವಾಡ ಹಾಕಿಕೊಂಡು ಕಾರ್ಯಾಚರಣೆ ಮಾಡುತ್ತಿರುವುದು ರೈತ ವಿರೋಧಿಯಾಗಿದೆ. ಪಂಜಾಬ್‌ನಲ್ಲಿರುವ ಕಾಂಗ್ರೆಸ್ ಸರ್ಕಾರ ರೈತರನ್ನು ಬೆಂಬಲಿಸಿ ಕಣಕ್ಕಿಳಿಸುತ್ತಿದೆ ಎಂದು ದೂರಿದರು.

ಸಚಿವ ಸಂಪುಟದ ಕುರಿತು ಪ್ರಕ್ರಿಯಿಸಿದ ಅವರು, ಸಂಪುಟ ರಚನೆ ಅಧಿಕಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಬೇರೆ ಪಕ್ಷದಿಂದ ಕೆಲವರು ರಾಜೀನಾಮೆ ನೀಡಿ ಬಂದಿದ್ದಾರೆ. ಅವರಿಗೆ ಆದ್ಯತೆ ನೀಡಿದ್ದರಿಂದ ಪಕ್ಷದ ಕೆಲವರಿಗೆ ತೊಂದರೆಯಾಗಿದೆ.

ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿತ್ಯವೂ ಮಾತನಾಡುವ ಚಾಳಿ ಇದೆ. ಇವ್ರೇ ಎಲ್ಲಾ ಮಾಡುತ್ತಿದ್ದರೆ, ಏಕೋಪಾದ್ಯಯ ಶಾಲೆಯ ಮುಖ್ಯೋಪಾದ್ಯಾಯರು ಆಗುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಬಿಜೆಪಿ ಜೊತೆ ಕೈಜೋಡಿಸುತ್ತದೆ ಎಂಬುವುದು ಗೊತ್ತಿಲ್ಲ. ಆದರೆ, ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಂದವರನ್ನು ಸೇರಿಸಿಕೊಳ್ಳುತ್ತೇವೆ. ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ಕಡಿಮೆ ಇರುವುದರಿಂದ ನಮ್ಮ ಜೊತೆ ಬರುತ್ತೇನೆ ಎಂದು ಹೇಳಿದ್ದು, ಜೆಡಿಎಸ್‌ಗೆ ಉಪ ಸಭಾಪತಿ, ಬಿಜೆಪಿಗೆ ಸಭಾಪತಿಯಾಗುವ ಒಪ್ಪಂದ ಆಗಬಹದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಹೇಳಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts