25.8 C
Gadag
Friday, June 9, 2023

ಕಾಂಗ್ರೆಸ್ ಆರೋಪಕ್ಕೆ ಜಾರಕಿಹೊಳಿ ಪುರಾವೆ: ಬಿಜೆಪಿಯಲ್ಲಿ ಅತೃಪ್ತಿ ತಾಂಡವ, ಜ.೨೦ ರಂದು ರಾಜಭವನ ಚಲೋ

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಆಪರೇಷನ್ ಕಮಲಕ್ಕೆ ಯೋಗೀಶ್ವರ್ ಕೋಟ್ಯಾಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದು, ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿ ಬಹಿರಂಗಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ ಯೋಗೀಶ್ವರ್ ೯ ಕೋಟಿ ರೂಪಾಯಿ ಸಾಲ ಮಾಡುವ ಅಗತ್ಯವೇನಿತ್ತು?. ಈ ಆರೋಪ ನಾವು ಮಾಡಿದ್ದರೆ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿವೆ ಎಂದು ನಿರಾಕರಿಸಬಹುದಿತ್ತು. ಈಗ ಅವರದ್ದೇ ಪಕ್ಷದ ಸಚಿವರು ಹೇಳಿದ್ದಾರಲ್ಲಾ, ಇದಕ್ಕೆ ಏನನ್ನುತ್ತಾರೆ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

ರಾಜ್ಯದಲ್ಲಿ ಸರ್ಕಾರವೇ ಜೀವಂತವಾಗಿಲ್ಲ. ಇನ್ನು ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡಿದರೆ ಜನರ ಮೇಲೆ ಯಾವ ಪರಿಣಾಮ ಬೀರಲು ಸಾಧ್ಯ. ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ. ಹೀಗಿರುವಾಗ ಅಭಿವೃದ್ದಿ ಕೆಲಸಗಳು ದೂರದ ಮಾತು ಎಂದು ಸಿದ್ದರಾಮಯ್ಯ ಟೀಕಿಸಿದರು.

ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ ಶಾಸಕನ ಹಕ್ಕಾಗಿದೆ. ಹೀಗಿದ್ದಾಗ ಬ್ಲಾಕ್‌ಮೇಲ್ ಮಾಡುವ ಅಗತ್ಯವೇನಿದೆ.

ಚಾಮರಾಜಪೇಟೆ ಕ್ಷೇತ್ರಕ್ಕೆ ಶಾಸಕ ಜಮೀರ್‌ಅಹ್ಮದ್ ಕೇಳಿದಷ್ಟು ಸಿಎಂ ಅನುದಾನ ನೀಡಿದ್ದರೆ, ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಅರ್ಥವಿರುತ್ತಿತ್ತು. ಮಂತ್ರಿಗಿರಿ ಕೈತಪ್ಪಿದ್ದರಿಂದ ಹತಾಶರಾಗಿ ಆಡಿರುವ ಮಾತುಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಯತ್ನಾಳ್‌ಗೆ ತಿರುಗೇಟು ನೀಡಿದರು.

ಕೃಷಿಗೆ ಮಾರಕವಾದ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಕಾಂಗ್ರೆಸ್ ಪಕ್ಷ ಶುಕ್ರವಾರ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಸಂಕ್ರಾಂತಿ ಹಬ್ಬದ ಕಾರಣಕ್ಕೆ ರಾಜ್ಯದಲ್ಲಿ ನಾವು ನಿನ್ನೆ ಪ್ರತಿಭಟನೆ ಮಾಡಿಲ್ಲ. ಹಾಗಾಗಿ ಜ.೨೦ ರಂದು ‘ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts