ಕಾಂಗ್ರೆಸ್ ನದ್ದು ಕ್ರಾಸ್ ಬ್ರೀಡ್ ಸಂತತಿ; ಸಚಿವ ಈಶ್ವರಪ್ಪ

0
Spread the love

ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ಜಾರಿಗೆ ತರುವುದನ್ನು ನಿಲ್ಲಿಸಲು ಆಗುವುದಿಲ್ಲ: ಶೋಭಾ

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

‘ಕ್ರಾಸ್ ಬ್ರೀಡ್ ಬಗ್ಗೆ ಸಿದ್ದರಾಮಯ್ಯನವರಿಗೆ ತುಂಬಾ ಆಸಕ್ತಿ ಇದೆ. ಕಾಂಗ್ರೆಸ್ ನವರದ್ದು ಕ್ರಾಸ್ ಬ್ರೀಡ್ ಸಂತತಿ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಹಿಂದೂ ಮುಸ್ಲಿಂ ಕ್ರಾಸ್ ಆಗಿ ಬಹಳ ಜನ ಹುಟ್ಟಿದ್ದಾರೆ ಎಂಬ ಸಿದ್ದರಾಮಯ್ಯನವರ
ಹೇಳಿಕೆಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಪ್ರತಿಕ್ರಿಯಿಸಿದ ಅವರು, ಲವ್ ಜಿಹಾದ್ ಬ್ಯಾನ್ ಮಾಡಬೇಕೆಂಬ ಚಿಂತನೆ ಇರುವುದು ನಿಜ. ಸಿದ್ದರಾಮಯ್ಯನವರ ಹೇಳಿಕೆಯೇ ಮೂರ್ಖತನದ್ದು. ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು.
ಮುಸಲ್ಮಾನರನ್ನು ಓಲೈಸುವುದು ಇನ್ನಾದರೂ ಬಿಡಬೇಕು ಎಂದು ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಕುಟುಕಿದರು.

‘ಲವ್ ಜಿಹಾದಿಗೆ ಕಾನೂನು ಬರಲೇಬೇಕು, ಅದು ಬರುತ್ತದೆ. ಲವ್ ಜಿಹಾದ್ ಕೇವಲ ಪ್ರೀತಿಯ ಸಂಗತಿಯಲ್ಲ ಮತಾಂತರದ ಷಡ್ಯಂತ್ರ, ದೇಶಾಂತರದ ಷಡ್ಯಂತ್ರ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ಜಾರಿಗೆ ತರುವುದನ್ನು ನಿಲ್ಲಿಸಲು ಆಗುವುದಿಲ್ಲ.
ಸಿದ್ದರಾಮಯ್ಯನವರು ಹಗುರವಾಗಿ, ಕೇವಲವಾಗಿ ಮಾತನಾಡಿದ್ದಾರೆ. ಅವರು ಯಾವ ಕ್ರಾಸ್ ಬಗ್ಗೆ ಮಾತನಾಡಿದ್ದಾರೆ? ಅವರಿಗೆ ಯಾವ ಕ್ರಾಸ್ ಬಗ್ಗೆ ಗೊತ್ತಿದೆ.? ಅದರಲ್ಲಿ ಅವರ ಪಾತ್ರವೇನು? ಈ ಬಗ್ಗೆ ನನಗೆ ಗೊತ್ತಿಲ್ಲ.ಹಾಗಾಗಿ ಅವರೇ ಉತ್ತರಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು.

ಲವ್ ಜಿಹಾದ್ ನಿಷೇಧದ ಕುರಿತ ವಿಚಾರಕ್ಕೆ ಸಿಟ್ಟಾದ ಸಿದ್ದರಾಮಯ್ಯ ಮದುವೆ ಎಂಬುವುದು ಪ್ರತಿಯೊಬ್ಬರ ವೈಯಕ್ತಿಕ ವಿಚಾರ. ಇಂತವರನ್ನೇ ಮದುವೆಯಾಗಿ ಎಂಬುವುದು ಸರಿಯಲ್ಲ. ಹಿಂದೂ ಮುಸ್ಲಿಂ ಕ್ರಾಸ್ ಆಗಿ ಬಹಳ ಜನ ಜನಿಸಿದ್ದಾರೆ. ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರಲು ನಮ್ಮ ವಿರೋಧವಿದೆ ಎಂದಿದ್ದರು.


Spread the love

LEAVE A REPLY

Please enter your comment!
Please enter your name here